ಬಜೆಟ್ನಲ್ಲಿ ಘೋಷಿಸಿದ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ಹಂತ ಹಂತವಾಗಿ ಬಜೆಟ್ನಲ್ಲಿ ಘೋಷಿಸಿದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಿದೆ ಎಂದು ಹೇಳಿದರು. ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ಈಗಾಗಲೇ 50 ಕೋಟಿ ರೂಪಾಯಿ ಅನುದಾನ ನೀಡಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ, ಮಂಗಳೂರಿಗೆ ಮಹಾತ್ಮ ಗಾಂಧಿ ನಗರ ವಿಕಾಸ್ ಯೋಜನೆಯಡಿ 125 ಕೋಟಿ ರೂಪಾಯಿ ಒದಗಿಸಲಾಗುವುದು. ಮೀನುಗಾರಿಕೆ ಅಭಿವೃದ್ಧಿ, ಕರಾವಳಿ ಆಂತರಿಕ ಭದ್ರತೆಗೆ ಆದ್ಯತೆ ಸೇರಿದಂತೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಸರಕಾರ ವಿಶೇಷ ಗಮನ ನೀಡಿದೆ ಎಂದರು. ಪ್ರವಾಸೋದ್ಯಮ ಕ್ಷೇತ್ರ ಮುಂದಿನ 6 ತಿಂಗಳಲ್ಲಿ ಹೊಸ ಬದಲಾವಣೆ ಕಾಣಲಿದೆ, ಈ ನಿಟ್ಟಿನಲ್ಲಿ ವಿಶೇಷ ಯೋಜನೆ ರೂಪಿಸಲಾಗಿದೆ. ಸಾಗರದ ಅಲೆಗಳಿಂದ ವಿದ್ಯುತ್ ಉತ್ಪಾದನೆಗೆ ಪೆÇ್ರೀತ್ಸಾಹ ನೀಡಲಾಗುವುದು ಎಂದು ಅವರು ಹೇಳಿದರು. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಾಸಕರಿಗೆ ತಲಾ 50 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ, ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ದೃಢ ಹೆಜ್ಜೆ ಇಡಲಾಗಿದೆ. ರಾಜ್ಯವನ್ನು ಡ್ರಗ್ಸ್ ಮುಕ್ತಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು.
Related Articles
3000 ಕೋಟಿ ವೆಚ್ಚದಲ್ಲಿ ಕೊಚ್ಚಿ-ಮಂಗಳೂರು ನಡುವೆ ನೈಸರ್ಗಿಕ ಅನಿಲ ಪೈಪ್ಲೈನ್ ದೇಶಕ್ಕೆ ಅರ್ಪಣೆ ಜನರ ಬದುಕು ಆಗಲಿದೆ ಸುಲಲಿತ: ಪ್ರಧಾನಿ ಮೋದಿ
January 6, 2021
Varta Mitra News - SP
ರಾಷ್ಟ್ರೀಯ, ಪ್ರಧಾನಿ ಮೋದಿ
Comments Off on 3000 ಕೋಟಿ ವೆಚ್ಚದಲ್ಲಿ ಕೊಚ್ಚಿ-ಮಂಗಳೂರು ನಡುವೆ ನೈಸರ್ಗಿಕ ಅನಿಲ ಪೈಪ್ಲೈನ್ ದೇಶಕ್ಕೆ ಅರ್ಪಣೆ ಜನರ ಬದುಕು ಆಗಲಿದೆ ಸುಲಲಿತ: ಪ್ರಧಾನಿ ಮೋದಿ
Seen By: 42 ಮಂಗಳೂರು: ಮಂಗಳೂರು ಮತ್ತು ಕೇರಳದ ಕೊಚ್ಚಿ ನಡುವಿನ ಅನಿಲ ಕೊಳವೆ ಮಾರ್ಗ ಯೋಜನೆ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಇದರಿಂದ ದೇಶದಲ್ಲಿ ಮಹತ್ತರ ಬದಲಾವಣೆ [more]
ರೌದ್ರಾವತಾರ ತಾಳಿದ ನೇತ್ರಾವತಿ; ದಕ್ಷಿಣ ಕನ್ನಡದಲ್ಲಿ ಮರುಕಳಿಸುತ್ತಾ 45 ವರ್ಷಗಳ ಹಿಂದಿನ ಮಹಾಪ್ರವಾಹ?
August 10, 2019
Samachar Network-NP
ರಾಜ್ಯ
Comments Off on ರೌದ್ರಾವತಾರ ತಾಳಿದ ನೇತ್ರಾವತಿ; ದಕ್ಷಿಣ ಕನ್ನಡದಲ್ಲಿ ಮರುಕಳಿಸುತ್ತಾ 45 ವರ್ಷಗಳ ಹಿಂದಿನ ಮಹಾಪ್ರವಾಹ?
Seen By: 49 ಬೆಂಗಳೂರು: ಉತ್ತರ ಕರ್ನಾಟಕ, ಮಲೆನಾಡು ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಕರಾವಳಿಯೂ ಪ್ರವಾಹಕ್ಕೆ ಬಲಿಯಾಗುವ ಸಾಧ್ಯತೆ ಎದುರಾಗಿದೆ. 2 ದಿನಗಳಿಂದ ಕರಾವಳಿ [more]
ನಮ್ಮದು ಅಂತ್ಯೋದಯ, ಅವರದ್ದು ವಂಶೋದಯ: ಕಾಂಗ್ರೆಸ್-ಜೆಡಿಎಸ್ ವಿರುದ್ಧ ಪ್ರಧಾನಿ ವಾಗ್ದಾಳಿ
April 13, 2019
Samachar Network-CLB
ರಾಜ್ಯ, ರಾಷ್ಟ್ರೀಯ
Comments Off on ನಮ್ಮದು ಅಂತ್ಯೋದಯ, ಅವರದ್ದು ವಂಶೋದಯ: ಕಾಂಗ್ರೆಸ್-ಜೆಡಿಎಸ್ ವಿರುದ್ಧ ಪ್ರಧಾನಿ ವಾಗ್ದಾಳಿ
Seen By: 67 ಮಂಗಳೂರು: ಕಾಂಗ್ರೆಸ್- ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರದ್ದು ವಂಶೋದಯ, ನಮ್ಮದು ಅಂತ್ಯೋದಯ, ನಮ್ಮ ಅಂತ್ಯೋದಯದಿಂದ ಪಾರದರ್ಶಕ ಆಡಳಿತ. [more]