ಯೋಗೇಶಗೌಡ ಕೊಲೆ ಪ್ರಕರಣ ಮತ್ತೆ ಮೂರು ದಿನ ವಿನಯ್ ಸಿಬಿಐ ವಶಕ್ಕೆ

ಧಾರವಾಡ: ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು 3ನೇ ಹೆಚ್ಚುವರಿ ನ್ಯಾಯಾಲಯ ಮೂರು ದಿನ (ನ.9ರವರೆಗೆ)ಸಿಬಿಐ ವಶಕ್ಕೆ ನೀಡಿ ಶುಕ್ರವಾರ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನದಲ್ಲಿ ಇರುವ ಮಾಜಿ ಸಚಿವ ವಿನಯ ಕುಲಕರ್ಣಿ ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆಗೆ ಒಳಪಡಿಸಲು ತಮ್ಮ ವಶಕ್ಕೆ ನೀಡುವಂತೆ ಸಿಬಿಐ ಅಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.
ಶುಕ್ರವಾರ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾೀರಾದ ಎಂ.ಪಂಚಾಕ್ಷರಿ ಅವರು ವಕೀಲರಿಂದ ವಾದ-ವಿವಾದ ಆಲಿಸಿ ಈ ಆದೇಶ ನೀಡಿದರು.
ಈ ಮೊದಲು ಆದ ಮಂಡಿಸಿದ ಸಿಬಿಐ ಪರ ವಕೀಲರು, ಆರೋಪಿ ವಿನಯ ಕುಲಕರ್ಣಿ ಅವರ ಮೇಲೆ ಗಂಭೀರ ಆರೋಪ ಕೇಳಿಬಂದಿವೆ. ಹೆಚ್ಚಿನ ವಿಚಾರಣೆಯ ಅಗತ್ಯವಿದ್ದು, ಮೂರು ದಿನ ಸಿಬಿಐ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಪ್ರತಿವಾದ ಮಂಡಿಸಿದ ಆರೋಪಿ ಪರ ವಕೀಲ ಬಾಹುಬಲಿ ದನವಾಡಿ, ಇದು ನಾಲ್ಕು ವರ್ಷದ ಹಿಂದಿನ ಪ್ರಕರಣ. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಹೆಚ್ಚಿನ ವಿಚಾರಣೆ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು.
ಅಲ್ಲದೇ, ಸಿಬಿಐ ವಶದ ಬಗ್ಗೆ ತಕಾರಾರು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾೀಶರಾದ ಎಂ.ಪಂಚಾಕ್ಷರಿ ಅವರು ಸಿಬಿಐ ಪರ ವಕೀಲರ ವಾದ ಪುರಸ್ಕರಿಸಿ ವಿನಯ ಅವರನ್ನು ನ.9ರವರೆಗೆ ವಿಚಾರಣೆಗೆ ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದರು.
ಗುರುವಾರ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಡಿ ಸಿಬಿಐ ಅಕಾರಿಗಳು ಕಲಂ 302, 143, 147, 148, 120-ಬಿ ಅಡಿ ವಿನಯ್ ಕುಲಕರ್ಣಿ ವಶಕ್ಕೆ ಪಡೆದು, ವಿಚಾರಣೆ ಬಳಕ 3ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ಒಂದು ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರಿಂದ, ಹಿಂಡಲಗಾ ಜೈಲಿನಲ್ಲಿದ್ದ ವಿನಯ ಅವರನ್ನು ಶುಕ್ರವಾರ ಹೆಚ್ಚಿನ ವಿಚಾರಣೆಗೆ ಪುನಃ ನ್ಯಾಯಾಲಯ ಸಿಬಿಐಗೆ ಹಸ್ತಾಂತರಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ