ಈ ಬಾರಿ ದೇಶದ ಜನತೆ ಸ್ಥಳೀಯ ಉತ್ಪನ್ನಗಳನ್ನು ಖರೀದಿಸುವ ಮೂಲಕ ದೀಪಾವಳಿ ಆಚರಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸ್ಥಳೀಯ ಉತ್ಪನ್ನಗಳ ಮೂಲಕ ದೀಪಾವಳಿ ಎಂಬ ಘೋಷವಾಕ್ಯದಡಿ ಜನತೆ ಸ್ಥಳೀಯ ಉತ್ಪನ್ನಗಳನ್ನು ಬಳಸಿ ಹಬ್ಬ ಆಚರಿಸಬೇಕೆಂದು ಹೇಳಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿ 30 ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ನೆರವೇರಿಸಿ, ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಮಾತನಾಡಿದ ಅವರು, ಪೂರ್ವಾಂಚಲ ಭಾಗದ ರೈತರು ಅತಿ ಹೆಚ್ಚು ಉತ್ಪನ್ನಗಳನ್ನು ಈ ಬಾರಿ ಬೆಳೆದಿದ್ದು, ಕೋವಿಡ್ -19 ಸಂಕಷ್ಟ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಅದರಲ್ಲೂ ಪ್ರಮುಖವಾಗಿ ವಾರಾಣಸಿ ಆರೋಗ್ಯ ಸೌಲಭ್ಯಗಳ ಕೇಂದ್ರವಾಗಿ ಹೊರಹೊಮ್ಮಿದೆ. ಕೇವಲ ಪೂರ್ವಾಂಚಲ ಭಾಗವಷ್ಟೇ ಅಲ್ಲದೆ, ಇಡೀ ದೇಶಕ್ಕೆ ವಾರಾಣಸಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ನಗರವಾಗಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಾಶಿನಗರದಲ್ಲಿ ಪ್ರಸ್ತುತ 8 ಸಾವಿರದ 900 ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈವರೆಗೆ 18 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳು ಮಂಜೂರಾಗಿವೆ ಎಂದು ಹೇಳಿದರು.
Related Articles
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅಭಿಮತ – ಕಿಕ್ಕರ್ ಮಲಹೊರುವ ಪದ್ಧತಿ ತಡೆಗೆ ತಂತ್ರಜ್ಞಾನ ಬಳಸಿ
January 16, 2021
Varta Mitra News - SP
ಬೆಂಗಳೂರು, ರಾಜ್ಯ, ರಾಜಕೀಯ, ಪ್ರಧಾನಿ ಮೋದಿ
Comments Off on ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅಭಿಮತ – ಕಿಕ್ಕರ್ ಮಲಹೊರುವ ಪದ್ಧತಿ ತಡೆಗೆ ತಂತ್ರಜ್ಞಾನ ಬಳಸಿ
Seen By: 69 ಬೆಂಗಳೂರು: ಮಲಹೊರುವ ಪದ್ಧತಿಗೆ ಕಡಿವಾಣ ಹಾಕಲು ತಂತ್ರಜ್ಞಾನ ಬಳಸಿಕೊಳ್ಳಲು ಸರ್ಕಾರ ಮುಂದಾಗಬೇಕಿದೆ ಎಂದು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ [more]
ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸಲು ರಾಷ್ಟ್ರೀಯ ಶಿಕ್ಷಣ ನೀತಿ ದೊಡ್ಡ ಅಭಿಯಾನ- ಪ್ರಧಾನಿ ಮೋದಿ
October 20, 2020
Varta Mitra News - SP
ರಾಜ್ಯ
Comments Off on ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸಲು ರಾಷ್ಟ್ರೀಯ ಶಿಕ್ಷಣ ನೀತಿ ದೊಡ್ಡ ಅಭಿಯಾನ- ಪ್ರಧಾನಿ ಮೋದಿ
Seen By: 49 ನವದೆಹಲಿ : ಕಳೆದ ಆರು ವರ್ಷಗಳಲ್ಲಿ ದೇಶದಲ್ಲಿ ಸರ್ವಾಂಗೀಣ ಸುಧಾರಣೆಗಳು ನಡೆದಿವೆ ಮತ್ತು ಕಳೆದ ಕೆಲವು ತಿಂಗಳುಗಳಿಂದ ಅದರ ವೇಗ ಮತ್ತು ವ್ಯಾಪ್ತಿ [more]
ವೀಡಿಯೋ ಕಾನರೆನ್ಸ್ ಮೂಲಕ ಚಾಲನೆ ನೀಡಲಿರುವ ಮೋದಿ ನಾಳೆ ಆಯುರ್ವೇದ ಸಂಸ್ಥೆಗಳ ಉದ್ಘಾಟನೆ
November 12, 2020
Varta Mitra News - SP
ರಾಷ್ಟ್ರೀಯ, ಪ್ರಧಾನಿ ಮೋದಿ, ಕಾರ್ಯಕ್ರಮಗಳು
Comments Off on ವೀಡಿಯೋ ಕಾನರೆನ್ಸ್ ಮೂಲಕ ಚಾಲನೆ ನೀಡಲಿರುವ ಮೋದಿ ನಾಳೆ ಆಯುರ್ವೇದ ಸಂಸ್ಥೆಗಳ ಉದ್ಘಾಟನೆ
Seen By: 62 ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಯುರ್ವೇದ ದಿನದ ಹಿನ್ನೆಲೆಯಲ್ಲಿ ಶುಕ್ರವಾರ ಗುಜರಾತ್ನ ಜಾಮ್ನಗರದಲ್ಲಿ ಆಯುರ್ವೇದ ಬೋಧನಾ ಮತ್ತು ಸಂಶೋಧನಾ ಸಂಸ್ಥೆ (ಐಟಿಆರ್ಎ) [more]