ನಿವಾರ್ ಚಂಡಮಾರುತ: ರಾಜ್ಯದಲ್ಲೂ ಮಳೆ ಸಾಧ್ಯತೆ ಬೆಂಗಳೂರು ಸೇರಿ ವಿವಿಧ ಜಿಲ್ಲೆಗೆ ಯೆಲ್ಲೋ ಅಲರ್ಟ್

ಬೆಂಗಳೂರು: ತಮಿಳುನಾಡಿನಲ್ಲಿ ನಿವಾರ್ ಚಂಡ ಮಾರುತ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ಕಚೇರಿ ಮುನ್ಸೂಚನೆ ನೀಡಿದೆ.
ನೈರುತ್ಯ ಬಂಗಾಳದ ಉಪಸಾಗರದಲ್ಲಿ ಚಂಡಮಾರುತ ಇದ್ದು ಬುಧವಾರ ಮಧ್ಯರಾತ್ರಿ ಇದು ವಾಯುವ್ಯ ದಿಕ್ಕಿಗೆ ಕಾರೈಕಲ್ ಮೂಲಕ ಚಂಡ ಮಾರುತ 120-130 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ.
ಇದರ ಪರಿಣಾಮ ರಾಜ್ಯದಲ್ಲಿಯೂ ಮಳೆಯಾಗುವ ಸಂಭವವಿದ್ದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮೀಣ, ತುಮಕೂರು,ಮಂಡ್ಯ ಜಿಲ್ಲೆಗಳಲ್ಲಿ ನ.25 ರಾತ್ರಿ ನ.28 ಮತ್ತು 29ರಂದು ಭಾರೀ ಮಳೆಯಾಗಲಿದೆ. ಅಲ್ಲದೇ ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನಲ್ಲಿ ನ.26 ಮತ್ತು 28ರಂದು ಒಣ ಹವೆ ಇರಲಿದ್ದು ನ.27ರಂದು ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗವ ಸಂಭವವಿದೆ. 25 ಮತ್ತು 26 ರಂದು ಬೆಂಗಳೂರು ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಮಳೆಯಾಗಲಿದ್ದು 25ರಿಂದ 29ರವರೆಗೆ ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ