ಕೋವಿಡ್ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಭಾರತ, ವಿಶ್ವದ ಔಷದಾಲಯವಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ. ಲಸಿಕೆಗಳ ಸಂಶೋಧನೆಯಲ್ಲಿ ಭಾರತ ಇಡೀ ವಿಶ್ವದಲ್ಲಿ ಮುಂಚೂಣಿಯಲ್ಲಿ ಇರುವುದು ಮಾತ್ರವಲ್ಲದೇ ವಿಶ್ವದ ಲಸಿಕೆ ಉತ್ಪಾದನಾ ಕ್ಷೇತ್ರದಲ್ಲೂ ಅತ್ಯಂತ ನಿರ್ಣಾಯಕವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಇತ್ತೀಚೆಗೆ ಪ್ರಧಾನಮಂತ್ರಿ, ದೇಶೀಯವಾಗಿ ಲಸಿಕೆ ಉತ್ಪಾದಿಸುತ್ತಿರುವ ಮೂರು ಪ್ರಮುಖ ನಗರಗಳಲ್ಲಿನ ಲಸಿಕಾ ತಯಾರಿಕಾ ಕಂಪೆನಿಗಳಿಗೆ ಭೇಟಿ ನೀಡಿ ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದ್ದಾರೆ. ಅಹಮದಾಬಾದ್ನಲ್ಲಿರುವ ಝೈಡಸ್ ಬಯೋಟೆಕ್ ಪಾರ್ಕ್, ಹೈದರಾಬಾದ್ನಲ್ಲಿರುವ ಭಾರತ್ ಬಯೋಟೆಕ್ ಮತ್ತು ಪುಣೆಯಲ್ಲಿರುವ ಸೆರಂ ಇನ್ಸ್ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪೆನಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಪೈಕಿ 2 ಕಂಪೆನಿಗಳು ದೇಶೀಯವಾಗಿ ಕೋವಿಡ್ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿವೆ. ಇಡೀ ಮಾನವ ಕುಲವನ್ನು ಸಂರಕ್ಷಿಸುವ ಸಲುವಾಗಿ ಕೋಟ್ಯಂತರ ಪ್ರಮಾಣದಲ್ಲಿ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಲಸಿಕಾ ಉತ್ಪಾದನಾ ಸಂಸ್ಥೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ವಿಜ್ಞಾನಿಗಳಿಗೆ ನೈತಿಕ ಸ್ಥೈರ್ಯ ತುಂಬುವ ಉದ್ದೇಶದಿಂದ ಭೇಟಿ ನೀಡಿರುವುದಾಗಿ ತಿಳಿಸಿದ್ದರು ಮತ್ತು ಸಂಕಷ್ಟದ ಸಂದರ್ಭದಲ್ಲಿ ಲಸಿಕೆ ಅಭಿವೃದ್ಧಿ ಪಡಿಸುತ್ತಿರುವ ವಿಜ್ಞಾನಿಗಳ ಪ್ರಯತ್ನಗಳನ್ನು ಅಭಿನಂದಿಸಿದ್ದರು.
Related Articles
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ
Seen By: 43 ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಹೊಸದಾಗಿ ಕೋವಿಡ್ ಸೋಂಕಿತರ ಸಂಖ್ಯೆ 1291 ಪತ್ತೆಯಾಗಿದ್ದು 40 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆಯೊಂದಿಗೆ ಸಾವಿನ ಸಂಖ್ಯೆಯೂ ಇಳಿಮುಖವಾಗಿದೆ. [more]
ವಾಯುಮಾಲಿನ್ಯದ ಸಂಚಕಾರ 2019ರಲ್ಲಿ 16 ಲಕ್ಷ ಮಂದಿ ಸಾವು
October 22, 2020
Varta Mitra News - SP
ರಾಷ್ಟ್ರೀಯ
Comments Off on ವಾಯುಮಾಲಿನ್ಯದ ಸಂಚಕಾರ 2019ರಲ್ಲಿ 16 ಲಕ್ಷ ಮಂದಿ ಸಾವು
Seen By: 47 ಹೊಸದಿಲ್ಲಿ : ದೇಶದಲ್ಲಿನ ಕೊರೋನಾ ಬಿಕ್ಕಟ್ಟು ಒಂದೆಡೆಯಾದರೆ ವಾಯು ಮಾಲಿನ್ಯ ಸಮಸ್ಯೆ ಮತ್ತೊಂದೆಡೆ ಜನರನ್ನು ಬಾಸುತ್ತಿದ್ದು, 2019ರಲ್ಲಿ 16 ಲಕ್ಷಕ್ಕೂ ಅಕ ಮಂದಿ [more]
ಮೈತ್ರಿ ಸರ್ಕಾರ ಬಂದ ಬಳಿಕ ಯಡಿಯೂರಪ್ಪ ಸರ್ಕಾರಕ್ಕೆ ಎರಡು ವರ್ಷ ಮುಳ್ಳಿನ ಹಾಸಿಗೆ!
July 25, 2021
Varta Mitra News - SP
ರಾಜ್ಯ
Comments Off on ಮೈತ್ರಿ ಸರ್ಕಾರ ಬಂದ ಬಳಿಕ ಯಡಿಯೂರಪ್ಪ ಸರ್ಕಾರಕ್ಕೆ ಎರಡು ವರ್ಷ ಮುಳ್ಳಿನ ಹಾಸಿಗೆ!
Seen By: 72 ಬೆಂಗಳೂರು,ಜು.24- ನಾಯಕತ್ವ ಬದಲಾವಣೆಯ ಸಾಧ್ಯತೆ ಬಲವಾಗುತ್ತಿರುವ ಬೆನ್ನಲ್ಲೇ, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ಎರಡು ವರ್ಷ ಪೂರೈಸುತ್ತಿದೆ. ಬಂಡಾಯದ ಸುಳಿಗೆ ಸಿಲುಕಿ [more]