ಭಾರತದಲ್ಲಿ ತಯಾರಿಸಲಾಗಿರುವ ಕೋವಿಡ್-19 ಎರಡು ಲಸಿಕೆಗಳಿಂದ ವಿಶ್ವದ ಮನುಕುಲವನ್ನು ಸಂರಕ್ಷಿಸಲು ಭಾರತ ಸಜ್ಜಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಮೇಡ್ ಇನ್ ಇಂಡಿಯಾದ ಉತ್ಪನ್ನಗಳು ಮತ್ತು ಪರಿಹಾರಗಳಿಂದ ಇಡೀ ವಿಶ್ವಕ್ಕೆ ಪ್ರಯೋಜನ ಲಭಿಸಲಿದೆ ಎಂದು ಅವರು 16ನೇ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಮಾಡಿದ ವರ್ಚುವಲ್ ಭಾಷಣದಲ್ಲಿ ತಿಳಿಸಿದರು. ಅನಿವಾಸಿ ಭಾರತೀಯರು ಕೋವಿಡ್-19 ವಿರುದ್ಧದ ಹೋರಾಟಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಅವರು ಪಿಎಂ-ಕೇರ್ ನಿಧಿಗೆ ನೀಡಿರುವ ಕೊಡುಗೆ ದೇಶದ ಆರೋಗ್ಯ ಸೇವಾ ವಲಯವನ್ನು ಬಲಪಡಿಸಿದೆ ಎಂದು ತಿಳಿಸಿದರು. ಬ್ರಾಂಡ್ ಇಂಡಿಯಾ ಬಲಪಡಿಸಲು ಅನಿವಾಸಿ ಭಾರತೀಯರು ನಿರ್ಣಾಯಕ ಪಾತ್ರ ವಹಿಸಬೇಕು. ಪ್ರವಾಸಿ ಭಾರತೀಯರು ಮೇಡ್ ಇನ್ ಇಂಡಿಯಾ ಉತ್ಪನ್ನಗಳನ್ನು ಬಳಸಬೇಕು. ಇದರಿಂದ ಜಾಗತಿಕ ಮಟ್ಟದಲ್ಲಿ ಭಾರತೀಯ ಉತ್ಪನ್ನಗಳ ಬಗ್ಗೆ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ಯುವ ಸಮುದಾಯ ದೇಶದ ಸಂಸ್ಕøತಿ ಮತ್ತು ಹಿರಿಮೆಯನ್ನು ಜಗತ್ತಿಗೆ ತಿಳಿಸಲು ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದರು. ಶಿಕ್ಷಣ ಕ್ಷೇತ್ರದಿಂದ ಹಿಡಿದು ಉದ್ಯಮ ವಲಯದವರೆಗೆ ಭಾರತದಲ್ಲಿ ರಚನಾತ್ಮಕ ಸುಧಾರಣೆಗಳನ್ನು ತರುವ ಮೂಲಕ ಆಮೂಲಾಗ್ರ ಬದಲಾವಣೆಗೆ ನಾಂದಿ ಹಾಡಲಾಗಿದೆ. ದೇಶದಲ್ಲಿ ತಯಾರಿಕೆ ಅಥವಾ ಉತ್ಪಾದನೆ ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರವು ಉತ್ಪಾದನೆ ಸಂಪರ್ಕಿತ ಪ್ರೋತ್ಸಾಹಕಧನ ಆರಂಭಿಸಿದೆ. ಇದು ಅಲ್ಪಾವಧಿಯಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಮಾತನಾಡಿ, ಕೋವಿಡ್ ಸೋಂಕು ದೇಶಕ್ಕೆ ಹಲವು ಪಾಠಗಳನ್ನು ಕಲಿಸಿತು. ಅದರಲ್ಲೂ ಮುಖ್ಯವಾಗಿ, ಸ್ವಾವಲಂಬಿ ಬದುಕು ಅಗತ್ಯ ಎಂಬುದನ್ನು ಮನವರಿಕೆ ಮಾಡಿಕೊಟ್ಟಿತು ಎಂದರು. ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಭಾರತ ಸ್ವಂತ ಲಸಿಕೆ ತಯಾರಿಸಿಕೊಳ್ಳುವದರ ಜೊತೆಗೆ ವಿಶ್ವದ ಇತರೆ ರಾಷ್ಟ್ರಗಳಿಗೆ ಪೂರೈಸಲು ಮುಂದಾಗಿದೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿ ಸುರಿನಾಮ್ ರಾಷ್ಟ್ರದ ಅಧ್ಯಕ್ಷ ಚಂದ್ರಿಕಾ ಪೆರ್ಸಾದ್ ಸಂತೋಖಿ ಮಾತನಾಡಿ, ಸುರಿನಾಮ್ ಭಾರತದೊಂದಿಗೆ ದೀರ್ಘ ಬಾಂಧವ್ಯ ಹಂಚಿಕೊಂಡಿದೆ. ಉಭಯ ರಾಷ್ಟ್ರಗಳು ಪುರಾತನ, ಪರಂಪರೆ, ಸಂಸ್ಕøತಿ ಮತ್ತು ಆಚರಣೆಗಳನ್ನು ನಿರ್ವಹಿಸುತ್ತಾ ಬಂದಿವೆ. ಈ ನಿಟ್ಟಿನಲ್ಲಿ ಎರಡೂ ರಾಷ್ಟ್ರಗಳು ವ್ಯಾಪಾರ ವಹಿವಾಟುಗಳನ್ನು ಬಲಪಡಿಸಲು ಆದ್ಯತೆಯ ಗಮನ ನೀಡಬೇಕಿದೆ ಎಂದು ತಿಳಿಸಿದರು.
Related Articles
ಸಕ್ರಿಯ ಸೋಂಕಿತರ ಸಂಖ್ಯೆ 5 ಲಕ್ಷಕ್ಕಿಂತ ಕಡಿಮೆ
November 12, 2020
Varta Mitra News - SP
ರಾಷ್ಟ್ರೀಯ, ಆರೋಗ್ಯ
Comments Off on ಸಕ್ರಿಯ ಸೋಂಕಿತರ ಸಂಖ್ಯೆ 5 ಲಕ್ಷಕ್ಕಿಂತ ಕಡಿಮೆ
Seen By: 54 ಹೊಸದಿಲ್ಲಿ :ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಭದ್ರವಾಗಿ ಕಾಲೂರಿದ್ದು,ಈಗಾಗಲೇ ಹಲವು ಮೈಲಿಗಲ್ಲುಗಳನ್ನು ದಾಟಿದೆ ಜತೆಗೆ ಸತತ ಚೇತರಿಕೆ ಪ್ರಕರಣಗಳಿಂದಾಗಿ 106 ದಿನಗಳ ನಂತರ [more]
ವಾಯುಮಾಲಿನ್ಯದ ಸಂಚಕಾರ 2019ರಲ್ಲಿ 16 ಲಕ್ಷ ಮಂದಿ ಸಾವು
October 22, 2020
Varta Mitra News - SP
ರಾಷ್ಟ್ರೀಯ
Comments Off on ವಾಯುಮಾಲಿನ್ಯದ ಸಂಚಕಾರ 2019ರಲ್ಲಿ 16 ಲಕ್ಷ ಮಂದಿ ಸಾವು
Seen By: 47 ಹೊಸದಿಲ್ಲಿ : ದೇಶದಲ್ಲಿನ ಕೊರೋನಾ ಬಿಕ್ಕಟ್ಟು ಒಂದೆಡೆಯಾದರೆ ವಾಯು ಮಾಲಿನ್ಯ ಸಮಸ್ಯೆ ಮತ್ತೊಂದೆಡೆ ಜನರನ್ನು ಬಾಸುತ್ತಿದ್ದು, 2019ರಲ್ಲಿ 16 ಲಕ್ಷಕ್ಕೂ ಅಕ ಮಂದಿ [more]
24 ಗಂಟೆಯಲ್ಲಿ 49 ಸಾವಿರ ಮಂದಿ ಚೇತರಿಕೆ
November 9, 2020
Varta Mitra News - SP
ರಾಷ್ಟ್ರೀಯ, ಆರೋಗ್ಯ
Comments Off on 24 ಗಂಟೆಯಲ್ಲಿ 49 ಸಾವಿರ ಮಂದಿ ಚೇತರಿಕೆ
Seen By: 42 ಹೊಸದಿಲ್ಲಿ:ದೇಶದಲ್ಲಿ ಸಕ್ರಿಯ ಸೋಂಕಿತರಿಗಿಂತ ಚೇತರಿಕೆ ಹೊಂದುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 49,082 ಮಂದಿ ಗುಣಮುಖರಾಗಿದ್ದಾರೆ. ಇದೇ ಅವಯಲ್ಲಿ [more]