ದೇಶಾದ್ಯಂತ ಇದೇ 16ರಂದು ಕೋವಿಡ್-19 ಲಸಿಕಾ ಆಂದೋಲನ ಆರಂಭವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಿ, ಕೋವಿಡ್-19 ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ ನೀಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಿರುವ ಸಿದ್ಧತೆಯ ಪರಿಶೀಲನೆ ನಡೆಸಿದರು. ಈ ಮಹತ್ವದ ಸಭೆಯಲ್ಲಿ ಸಂಪುಟ ಕಾರ್ಯದರ್ಶಿ, ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ ಮತ್ತು ನಾನಾ ಇಲಾಖೆಗಳ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು. ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳಿಗೆ ಆರೋಗ್ಯ ನಿಯಂತ್ರಣ ಸಂಸ್ಥೆ ಅನುಮೋದನೆ ನೀಡಿದ್ದು, ಇವು ಸಂಪೂರ್ಣ ಸುರಕ್ಷಿತ ಮತ್ತು ಸೋಂಕು ನಿಯಂತ್ರಣ ಶಕ್ತಿ ಹೊಂದಿವೆ ಎಂದು ಸಭೆ ಅನುಮೋದಿಸಿದೆ. ಕೋವಿಡ್-19 ಲಸಿಕೆ ನೀಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಡೆಸಿರುವ ಸಿದ್ಧತೆ ಕುರಿತು ಸಮಾಲೋಚನೆ ನಡೆಸಿದ ಪ್ರಧಾನಂತ್ರಿ ಅವರು, ಜನರ ಪಾಲ್ಗೊಳ್ಳುವಿಕೆ, ಚುನಾವಣಾ ಅನುಭವದ ಬಳಕೆ ಮತ್ತು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮಗಳ ತತ್ವಗಳನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ದೇಶಾದ್ಯಂತ ಸುಮಾರು 3 ಕೋಟಿ ಆರೋಗ್ಯ ಸಂರಕ್ಷಣಾ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು. ಎರಡನೇ ಹಂತದಲ್ಲಿ 50 ವರ್ಷ ದಾಟಿದವರಿಗೆ ಸೋಂಕಿತರಿಗೆ ಮತ್ತು ಮೂರನೇ ಹಂತದಲ್ಲಿ 50 ವರ್ಷದೊಳಗಿನ ಗುಂಪುಗಳಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಕೋ-ವಿನ್ ಲಸಿಕಾ ವಿತರಣೆ ನಿರ್ವಹಣೆ ವ್ಯವಸ್ಥೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು ಈಗಾಗಲೇ 79 ಲಕ್ಷಕ್ಕಿಂತ ಹೆಚ್ಚಿನ ಫಲಾನುಭವಿಗಳು ಇದರಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
Related Articles
ಏರುತಿದೆ ಕೋರೋನಾ ಸೋಂಕು
Seen By: 50 ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಹೊಸದಾಗಿ 10913 ಕೋವಿಡ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆಯಲ್ಲದೇ, 9091 ಮಂದಿ [more]
ಹಥ್ರಾಸ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಮೊರೆ
October 9, 2020
Varta Mitra News - SP
ರಾಷ್ಟ್ರೀಯ, ಕ್ರೈಮ್
Comments Off on ಹಥ್ರಾಸ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಮೊರೆ
Seen By: 56 ನವದೆಹಲಿ: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದ ಯುವತಿಯ ಮೇಲೆ ಅತ್ಯಾಚಾರ ಹಾಗೂ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಕೋರಿ ಎನ್ಜಿಒವೊಂದು ಸುಪ್ರೀಂಕೋರ್ಟ್ [more]
ಕೊರೋನಾ ಲಸಿಕೆ ಸಂಶೋಧನಾ ಕೇಂದ್ರಗಳಿಗೆ ಪ್ರಧಾನಿ ಮೋದಿ ಭೇಟಿ ಕಾಂಗ್ರೆಸ್ ನಾಯಕ ಶ್ಲಾಘನೆ: ಅಂತರ ಕಾಯ್ದುಕೊಂಡ ಪಕ್ಷ
December 1, 2020
Varta Mitra News - SP
ರಾಷ್ಟ್ರೀಯ
Comments Off on ಕೊರೋನಾ ಲಸಿಕೆ ಸಂಶೋಧನಾ ಕೇಂದ್ರಗಳಿಗೆ ಪ್ರಧಾನಿ ಮೋದಿ ಭೇಟಿ ಕಾಂಗ್ರೆಸ್ ನಾಯಕ ಶ್ಲಾಘನೆ: ಅಂತರ ಕಾಯ್ದುಕೊಂಡ ಪಕ್ಷ
Seen By: 55 ಹೊಸದಿಲ್ಲಿ : ಕೋವಿಡ್-19 ಲಸಿಕೆ ಅಭಿವೃದ್ಧಿ ಕೇಂದ್ರಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿರುವುದನ್ನು ಹಿರಿಯ ಕಾಂಗ್ರೆಸ್ ನಾಯಕ ಆನಂದ ಶರ್ಮ ಶ್ಲಾಘಿಸಿದ್ದಾರೆ. [more]