ದೇಶದಲ್ಲಿ ಕೋವಿಡ್ ಸೋಂಕಿನಿಂದ ಚೇತರಿಕೆಯ ಪ್ರಮಾಣ ಶೇಕಡ 96.49ಕ್ಕೆ ಏರಿಕೆಯಾಗಿದೆ. ಕಳೆದ 24 ತಾಸಿನಲ್ಲಿ 18 ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಈವರೆಗೆ ಗುಣಮುಖರಾದವರ ಸಂಖ್ಯೆ 1 ಕೋಟಿ ಒಂದು ಲಕ್ಷಕ್ಕೆ ಏರಿದೆ. ಭಾರತದಲ್ಲಿನ ಚೇತರಿಕೆ ಪ್ರಮಾಣ ವಿಶ್ವದಲ್ಲೇ ಅತ್ಯಧಿಕವಾಗಿದೆ. ಒಟ್ಟು ದೃಢಪಟ್ಟ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ ಶೇಕಡ 2.07ರಷ್ಟಿದ್ದು, ಸದ್ಯ ಈ ಪ್ರಕರಣಗಳ ಸಂಖ್ಯೆ 2 ಲಕ್ಷದ 16 ಸಾವಿರದಷ್ಟಿದೆ. ಕಳೆದ 24 ತಾಸಿನಲ್ಲಿ 12 ಸಾವಿರದ 584 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ ಒಂದು ಕೋಟಿ 4 ಲಕ್ಷ ದಾಟಿದೆ. ಭಾರತದಲ್ಲಿ ಸೋಂಕಿನಿಂದ ಸಾವಿನ ಪ್ರಮಾಣ ಶೇಕಡ 1.44ರಷ್ಟಿದ್ದು, ಇದು ಜಾಗತಿಕವಾಗಿ ಕನಿಷ್ಠ ಪ್ರಮಾಣವಾಗಿದೆ. ಕಳೆದ 24 ತಾಸಿನಲ್ಲಿ 167 ಮಂದಿ ಸೋಂಕಿನಿಂದ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ ಒಂದು ಲಕ್ಷ 51 ಸಾವಿರದ 327ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ತಾಸಿನಲ್ಲಿ 8 ಲಕ್ಷದ 97 ಸಾವಿರ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರೊಂದಿಗೆ ಈವರೆಗೆ ಪರೀಕ್ಷಿಸಲಾದ ಒಟ್ಟು ಕೋವಿಡ್ ಮಾದರಿಗಳ ಸಂಖ್ಯೆ 18 ಕೋಟಿ 26 ಲಕ್ಷಕ್ಕೆ ಏರಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
Related Articles
ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಯಾತ್ರಿಕರಿಗೆ ವಿತರಣೆ ಶಬರಿಮಲೆಯಲ್ಲಿ ಔಷೀಯ ನೀರು
November 26, 2020
Varta Mitra News - SP
ರಾಜ್ಯ, ಧರ್ಮ - ಸಂಸ್ಕೃತಿ
Comments Off on ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಯಾತ್ರಿಕರಿಗೆ ವಿತರಣೆ ಶಬರಿಮಲೆಯಲ್ಲಿ ಔಷೀಯ ನೀರು
Seen By: 54 ತಿರುವನಂತಪುರಂ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಭಕ್ತಾದಿಗಳಿಗೆ ಔಷಯ ಗುಣಗಳುಳ್ಳ ಕುಡಿಯುವ ನೀರನ್ನು ಈ ಬಾರಿ ಸ್ಟೀಲ್ ಬಾಟಲ್ಗಳಲ್ಲಿ [more]
ಭಾರತೀಯ ವೈದ್ಯಕೀಯ ಸಂಘ ಎಚ್ಚರಿಕೆ | ಕೊರೋನಾ 3ನೇ ಅಲೆ ಸನಿಹ ಜನ ಸೇರಿದರೆ ಆಪತ್ತು
July 13, 2021
Varta Mitra News - SP
ರಾಷ್ಟ್ರೀಯ
Comments Off on ಭಾರತೀಯ ವೈದ್ಯಕೀಯ ಸಂಘ ಎಚ್ಚರಿಕೆ | ಕೊರೋನಾ 3ನೇ ಅಲೆ ಸನಿಹ ಜನ ಸೇರಿದರೆ ಆಪತ್ತು
Seen By: 55 ಹೊಸದಿಲ್ಲಿ: ಕೊರೋನಾ ಮೂರನೇ ಅಲೆಯು ಸನಿಹದಲ್ಲಿದ್ದು ಪ್ರವಾಸೋದ್ಯಮ, ತೀರ್ಥಯಾತ್ರೆ, ಇತರ ಧಾರ್ಮಿಕ ಉತ್ಸವಗಳಲ್ಲಿ ಜನರು ಸೇರದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಚ್ಚರಿಕೆ [more]
ಇಎಂಐ ಮೇಲಿನ ಬಡ್ಡಿ ಮನ್ನಾಗೆ ಸುಪ್ರೀಂ ಸೂಚನೆ
October 15, 2020
Varta Mitra News - SP
ರಾಷ್ಟ್ರೀಯ
Comments Off on ಇಎಂಐ ಮೇಲಿನ ಬಡ್ಡಿ ಮನ್ನಾಗೆ ಸುಪ್ರೀಂ ಸೂಚನೆ
Seen By: 45 ನವದೆಹಲಿ: ಕೊರೋನಾ ವೈರಸ್ ಲಾಕ್ಡೌನ್ ಸಂದರ್ಭದಲ್ಲಿ ಮೊರಾಟೋರಿಯಂ ಅವಧಿಯಲ್ಲಿನ ಸಾಲ ಮರುಪಾವತಿ ಮೇಲಿನ ಬಡ್ಡಿಯನ್ನು ಸರ್ಕಾರ ಆದಷ್ಟೂ ಶೀಘ್ರದಲ್ಲಿ ಮನ್ನಾಗೊಳಿಸಬೇಕೆಂದು ಸರ್ವೋಚ್ಚ ನ್ಯಾಯಾಲಯ [more]