ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ, ಮೀನುಗಾರರಿಗೆ ಸಂಕಷ್ಟ ಪರಿಹಾರ, ಮತ್ಸ್ಯಾಶ್ರಯ ಮತ್ತು ಭಾಗ್ಯಲಕ್ಷ್ಮಿ ಯೋಜನೆಯಡಿ ಚೆಕ್ ವಿತರಿಸಿದರು. ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು. ನಂತರ ಕುಂದಾಪುರದ ಕುಂಬಾಶಿಗೆ ಭೇಟಿ ನೀಡಿದ ಮುಖ್ಯಮಂತ್ರಿ, ಸುದ್ದಿಗಾರರೊಂದಿಗೆ ಮಾತನಾಡಿ,ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ಶ್ರಮಿಸುತ್ತಿದೆ. ಹಣಕಾಸಿನ ಇತಿಮಿತಿಯನ್ನು ಗಮನದಲ್ಲಿರಿಸಿ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲಾಗುವುದು, ನೂತನವಾಗಿ ಆಯ್ಕೆಯಾದ ಸಚಿವರುಗಳಿಗೆ ಇನ್ನೆರಡು ದಿನಗಳಲ್ಲಿ ಖಾತೆ ಹಂಚಿಕೆ ಮಾಡಲಾಗುವುದು ಎಂದರು. ರಾಜ್ಯಾದ್ಯಂತ ಇರುವ ಬಿಲ್ಲವ, ಈಡಿಗ, ನಾಮಾಧಾರಿ ಮತ್ತಿತರ ಉಪ ಪಂಗಡಗಳ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲು ಈ ಬಾರಿಯ ಬಜೆಟ್ ನಲ್ಲಿ 50 ಕೋಟಿ ರೂಪಾಯಿ ಮೀಸಲಿರಿಸಲು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದ ತಂಡ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿತು.
Related Articles
ವಿಶ್ವೇಶತೀರ್ಥ ಸ್ವಾಮೀಜಿ ಸನ್ಯಾಸತ್ವ ಸ್ವೀಕರಿಸಿ 80 ವರ್ಷ: ರಾಷ್ಟ್ರಪತಿ ರಾಮನಾಥ ಕೋವಿಂದ ಗೌರವ
December 27, 2018
Samachar Network-CLB
ರಾಜ್ಯ
Comments Off on ವಿಶ್ವೇಶತೀರ್ಥ ಸ್ವಾಮೀಜಿ ಸನ್ಯಾಸತ್ವ ಸ್ವೀಕರಿಸಿ 80 ವರ್ಷ: ರಾಷ್ಟ್ರಪತಿ ರಾಮನಾಥ ಕೋವಿಂದ ಗೌರವ
Seen By: 61 ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸನ್ಯಾಸತ್ವ ಸ್ವೀಕರಿಸಿ 80 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಡುಪಿ ಮಠಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ [more]
ಪೊಲೀಸರಿಗೆ ಸಿಎಂ ಯಡಿಯೂರಪ್ಪ ನಿರ್ದೇಶನ ದೌರ್ಜನ್ಯ ತಡೆಗಾಗಿ ಶಿಕ್ಷೆ ಪ್ರಮಾಣ ಹೆಚ್ಚಳ
November 12, 2020
Varta Mitra News - SP
ಬೆಂಗಳೂರು, ರಾಜ್ಯ, ರಾಜಕೀಯ, ಸಿಎಂ ಹೆಚ್ಡಿಕೆ
Comments Off on ಪೊಲೀಸರಿಗೆ ಸಿಎಂ ಯಡಿಯೂರಪ್ಪ ನಿರ್ದೇಶನ ದೌರ್ಜನ್ಯ ತಡೆಗಾಗಿ ಶಿಕ್ಷೆ ಪ್ರಮಾಣ ಹೆಚ್ಚಳ
Seen By: 41 ಬೆಂಗಳೂರು: ರಾಜ್ಯದಲ್ಲಿ ದೌರ್ಜನ್ಯ ತಡೆ ಕಾಯ್ದೆಯಲ್ಲಿನ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕೇವಲ ಶೇ.5 ರಿಂದ 6 ರಷ್ಟಿವೆ. ಶಿಕ್ಷೆಯ ಪ್ರಮಾಣ ಹೆಚ್ಚಿಸಲು ವ್ಯಾಜ್ಯ [more]
ಶ್ರೀ ಕೃಷ್ಣನ ಸಾನ್ನಿಧ್ಯದಲ್ಲಿ ಆಮೆಗೆ ಅನ್ನ ಪ್ರಾಶನ
December 28, 2018
Samachar Network-CLB
ರಾಜ್ಯ, ಧರ್ಮ - ಸಂಸ್ಕೃತಿ
Comments Off on ಶ್ರೀ ಕೃಷ್ಣನ ಸಾನ್ನಿಧ್ಯದಲ್ಲಿ ಆಮೆಗೆ ಅನ್ನ ಪ್ರಾಶನ
Seen By: 87 ಉಡುಪಿ: ವಿಷ್ಣುವಿನ ದಶಾವತಾರಗಳಲ್ಲಿ ಕೂರ್ಮಾವತಾರವೂ ಒಂದು. ಅಂತಹ ಭಗವಾನ್ ಸ್ವರೂಪಿ ಆಮೆಗೆ ಕೃಷ್ಣ ಸಾನ್ನಿಧ್ಯದಲ್ಲಿ ಯತಿ ಶ್ರೇಷ್ಠರು ಅನ್ನ ಪ್ರಾಶನ ನಡೆಸಿದರು. ಇದು [more]