ಪ್ರತಿದಿನ ಕನಿಷ್ಠ 40ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡುವ ಗುರಿಯನ್ನು ಮಾರ್ಚ್ ಅಂತ್ಯದೊಳಗೆ ಸಾಧಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ದೆಹಲಿಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಪ್ರತಿದಿನ 30 ಕಿಲೋ ಮೀಟರ್ ರಸ್ತೆ ನಿರ್ಮಾಣ ಗುರಿ ಸಾಧಿಸಿದೆ. ದೇಶದಲ್ಲಿ ಪ್ರತಿದಿನ ರಸ್ತೆ ಅಪಘಾತಗಳಲ್ಲಿ ಸರಾಸರಿ 415 ಜನರು ಮರಣ ಹೊಂದುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ರಸ್ತೆಗಳ ಗುಣಮಟ್ಟ ಕಾಪಾಡಲು ಬದ್ಧವಾಗಿದೆ. ರಸ್ತೆಗಳಲ್ಲಿರುವ ಗುಂಡಿ, ಕಂದಕಗಳನ್ನು ಮುಚ್ಚಲು 14 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು. ಜನರ ಪ್ರಯಾಣ ಮತ್ತು ಸಂಚಾರ ಸುರಕ್ಷತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು. ರಕ್ಷಣಾ ಸಚಿವ ರಾಜನಾಥ್ಸಿಂಗ್ ಮಾತನಾಡಿ, ರಸ್ತೆ ಸುರಕ್ಷತೆ ಕೇವಲ ಒಂದು ತಿಂಗಳಿಗೆ ಸೀಮಿತವಾಗದೇ ನಿರಂತರ ಪ್ರಕ್ರಿಯೆಯಾಗಬೇಕು. ದೇಶದ ಆರ್ಥಿಕತೆಯ ಪ್ರಗತಿಗೆ ರಸ್ತೆಗಳು ಜೀವನಾಡಿಗಳಾಗಿವೆ. ರಸ್ತೆಗಳ ಮೂಲ ಸೌಕರ್ಯ ಅಭಿವೃದ್ಧಿಪಡಿಸಿ ರಸ್ತೆ ಸಂಪರ್ಕಗಳ ಸುಧಾರಣೆಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು.
Related Articles
ಆರ್ಎಸ್ಎಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೋದಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾರೆ: ಜೆ ಎನ್ ಯು ವಿದ್ಯಾರ್ಥಿ ಹಕ್ಕುಗಳ ಕಾರ್ಯಕರ್ತೆ ಶೆಹ್ಲಾ ರಶೀದ್
June 11, 2018
Samachar Network-CLB
ರಾಷ್ಟ್ರೀಯ, ರಾಜಕೀಯ, ಪ್ರಧಾನಿ ಮೋದಿ
Comments Off on ಆರ್ಎಸ್ಎಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೋದಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾರೆ: ಜೆ ಎನ್ ಯು ವಿದ್ಯಾರ್ಥಿ ಹಕ್ಕುಗಳ ಕಾರ್ಯಕರ್ತೆ ಶೆಹ್ಲಾ ರಶೀದ್
Seen By: 82 ನವದೆಹಲಿ:ಜೂ-11: ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬಹಿರಂಗದ ಬೆನ್ನಲ್ಲೇ ಶೆಹ್ಲಾ ರಶೀದ್ ಎಂಬುವರು [more]
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಗಡ್ಕರಿ
December 25, 2018
Samachar Network-CLB
ರಾಷ್ಟ್ರೀಯ
Comments Off on ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಗಡ್ಕರಿ
Seen By: 60 ನವದೆಹಲಿ: ಪಕ್ಷದ ಶಾಸಕರು, ಸಂಸದರು ಸಮರ್ಪಕವಾಗಿ ಕೆಲಸ ಮಾಡದಿದ್ದರೆ ಅದಕ್ಕೆ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ [more]
ಕಾವೇರಿ ನಿರ್ವಹಣಾ ಮಂಡಳಿ ರಚನೆ ಸುಲಭದ ಕೆಲಸವಲ್ಲ; ಕಾಲಾವಕಾಶದ ಅಗತ್ಯವಿದೆ: ಸುಪ್ರೀಂ ಗೆ ಕೇಂದ್ರ ಸರ್ಕಾರದ ಹೇಳಿಕೆ
February 27, 2018
Samachar Network
ರಾಜ್ಯ, ರಾಷ್ಟ್ರೀಯ, ರಾಜಕೀಯ
Comments Off on ಕಾವೇರಿ ನಿರ್ವಹಣಾ ಮಂಡಳಿ ರಚನೆ ಸುಲಭದ ಕೆಲಸವಲ್ಲ; ಕಾಲಾವಕಾಶದ ಅಗತ್ಯವಿದೆ: ಸುಪ್ರೀಂ ಗೆ ಕೇಂದ್ರ ಸರ್ಕಾರದ ಹೇಳಿಕೆ
Seen By: 79 ನವದೆಹಲಿ:ಫೆ-27: ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಷ್ಟು ಸುಲಭವಲ್ಲ; ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಕಾವೇರಿ ನಿರ್ವಹಣಾ ಮಂಡಳಿ [more]