ನಾನು ಎಲ್ಲೂ ಸಹ ಕೆಆರ್‍ಎಸ್ ಬಿರುಕು ಬಿಟ್ಟಿದೆ ಎಂದು ಹೇಳಿಲ್ಲ : ಮಂಡ್ಯ ಸಂಸದೆ ಸುಮಲತಾ

ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದು, ಅಕ್ರಮ ಗಣಿಗಾರಿಕೆಯಿಂದ ಕೆಆರ್‍ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆಯಾ ಎಂದು ದಿಶಾ ಸಭೆಯಲ್ಲಿ ಪ್ರಶ್ನಿಸಿದ್ದೆ. ಆದರೆ ಇದನ್ನೇ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ.

ನಾನು ಎಲ್ಲಿಯೂ ನೇರವಾಗಿ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಹೇಳಿಲ್ಲ ಎಂದಿದ್ದಾರೆ.

ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಬಳಕೆಯಿಂದ ಕೆಆರ್‍ಎಸ್ ಡ್ಯಾಂನಲ್ಲಿ ಬಿರುಕು ಸಂಬಂಧ ರೈತರು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದರು. ಇದು ತಪ್ಪೆ? ಇಲ್ಲ ನಾನು ಸುಮ್ಮನಿರಬೇಕಿತ್ತಾ ಎಂದರು.

ನಾನು ಎಲ್ಲೂ ಸಹ ಕೆಆರ್‍ಎಸ್ ಬಿರುಕು ಬಿಟ್ಟಿದೆ ಎಂದು ಹೇಳಿಲ್ಲ. ಸಂಸದೆಯಾಗಿ ದಿಶಾಸಭೆಯಲ್ಲಿ ಪ್ರಶ್ನಿಸಿದ್ದೆ. ಲೈಸೆ£್ಸï ಅವಧಿ ಮುಗಿದರೂ, ಅನುಮತಿ ಇಲ್ಲದೆ ಅಕ್ರಮವಾಗಿ ಅಣೆಕಟ್ಟೆ ಸುತ್ತ ಮುತ್ತಾ ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ