ಸಿಎಂ ಸಿದ್ದರಾಮಯ್ಯ ಪರ ನಟ ದರ್ಶನ್ ಪ್ರಚಾರ: ಜೆಡಿಎಸ್ ಕಾರ್ಯಕರ್ತರ ತೀವ್ರ ಪ್ರತಿಭಟನೆ

ಮೈಸೂರು:ಮೇ-5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರತೊಡಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರಚಾರ ನಡೆಸಲು ತಾರಾ ಪ್ರಚಾರಕರ ದಂಡೇ ಹರಿದು ಬರುತ್ತಿದೆ.

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅವರು ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಆಗಮಿಸಿದ್ದಾರೆ.

ಈ ನಡುವೆ ನಾಗನಹಳ್ಳಿಯಲ್ಲಿ ಜೆಡಿಎಸ್‌ ಕಾಯಕರ್ತರು ದರ್ಶನ್ ಪ್ರಚಾರಕ್ಕೆ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಂಬರೀಷ್‌ ಅವರ ಸಚಿವ ಸ್ಥಾನ ಕಿತ್ತುಕೊಂಡಾಗ ಯಾಕೆ ಮಾತನಾಡಲಿಲ್ಲ, ಕಾವೇರಿ ಪರ ಹೋರಾಟ ಯಾಕೆ ಮಾಡಲಿಲ್ಲ ಎಂದು ಪ್ರತಿಭಟನಾ ನಿರತರು ದರ್ಶನ್‌ ಅವರನ್ನು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರೂ ಪ್ರತಿಭಟನೆ ನಡೆಸಿದ್ದು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಈ ಮಧ್ಯೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ ಆರಂಭಿಸಿದ ವೇಳೆ ಜೆಡಿಎಸ್ ಕಾರ್ಯಕರ್ತರು ಬಾವುಟ ಪ್ರದರ್ಶನ ಮಾಡಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕಕಗಿ ಪೊಲೀಸರು ಲಘು ಲಾಠಿಪ್ರಹಾನ ನಡೆಸಿದ ಘಟನೆ ನಡೆದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ