ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರೈತನ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆ

ದಾವಣಗೆರೆ, ಮೇ 27-ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರೈತನ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಚನ್ನಗಿರಿ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಬಸಪ್ಪ (68) ಮೃತ ದುರ್ದೈವಿ.
ಇತ್ತೀಚೆಗೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಬಿದ್ದ ಕೆರೆಗೆ ನಿನ್ನೆ ಸುರಿದ ಮಳೆಯಲ್ಲಿ ಬಸಪ್ಪ ನೀರಿನಲ್ಲಿ ಕೊಚ್ಚಿಹೋಗಿದ್ದರು. ಬಸಪ್ಪ ಅವರ ದೇಹ ಸ್ವಲ್ಪ ದೂರದಲ್ಲೇ ಮಣ್ಣಿನಲ್ಲಿ ಹೂತಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬಸಪ್ಪ ಶವಕ್ಕಾಗಿ ಎಲ್ಲೆಡೆ ಹುಡುಕಾಡಿದರೂ ಶವ ದೊರೆಕಿರಲಿಲ್ಲ. ಕೊನೆಗೂ ಹರಸಾಹಸಪಟ್ಟು ಶವ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಬಸಪ್ಪ ಅವರ ನಿಧನದಿಂದ ಕುಟುಂಬ ಸದಸ್ಯರ ರೋದನ ಮುಗಿಲುಮುಟ್ಟಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ