ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಇಂದು ಆಷಾಢ ಶುಕ್ರವಾರ ಅವಿಶ್ವಾಸ ಮತ ಎದುರಿಸುವ ಅಗ್ನಿಪರೀಕ್ಷೆ ಎದುರಾಗಿದೆ. ಇದರಲ್ಲಿ ಗೆದ್ದುಬರುವ ವಿಶ್ವಾಸದಲ್ಲಿ ಬಿಜೆಪಿ ಇದ್ದರೂ ಕೂಡ ಲೋಕಸಭೆಯಲ್ಲಿ ಏನಾಗುತ್ತದೆ ಎಂಬ ಇಡೀ ದೇಶದ ಜನತೆಯ ಗಮನ ಶಕ್ತಿಕೇಂದ್ರ ದೆಹಲಿಯ ಸಂಸತ್ತು ಮೇಲಿದೆ. ಲೋಕಸಭೆಯಲ್ಲಿ ಇಂದು ತೀವ್ರ ಗದ್ದಲ, ಕೋಲಾಹಲ ಏರ್ಪಡುವ ಸಾಧ್ಯತೆಯಿರುವುದರಿಂದ ಸಂಸದರು ಸಂಯಮ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಹೋದ್ಯೋಗಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅವಿಶ್ವಾಸ ನಿರ್ಣಯ ಮಂಡನೆ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಅವರು, ”ಇಂದು ನಮ್ಮ ಸಂಸತ್ತಿನ ಪ್ರಜಾಪ್ರಭುತ್ವದಲ್ಲಿ ಬಹಳ ಮುಖ್ಯವಾದ ದಿನ. ಈ ಸಂದರ್ಭದಲ್ಲಿ ನನ್ನ ಸಂಸದ ಸಹೋದ್ಯೋಗಿಗಳು ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ. ಇಲ್ಲಿ ರಚನಾತ್ಮಕ, ಸಮಗ್ರ ಮತ್ತು ಮುಕ್ತ ಚರ್ಚೆ ನಡೆಯುತ್ತದೆ ಎಂದು ಭಾವಿಸುತ್ತೇನೆ. ಸಂಸತ್ತಿನಲ್ಲಿ ಗೌರವಯುತವಾಗಿ ನಡೆದುಕೊಂಡು ರಚನಾತ್ಮಕ ಚರ್ಚೆ ನಡೆಸಿ ಉತ್ತಮ ಆಡಳಿತವನ್ನು ಜನತೆಗೆ ನೀಡೋಣ, ಆ ಮೂಲಕ ಸಂವಿಧಾನವನ್ನು ರಚಿಸಿದವರಿಗೆ ಗೌರವ ಸಲ್ಲಿಸೋಣ, ದೇಶದ ಜನತೆ ನಮ್ಮನ್ನು ಬಹಳ ಹತ್ತಿರದಿಂದ ಗಮನಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.ಇಂದಿನ ಕಲಾಪದಲ್ಲಿ ಲೋಕಸಭೆಯಲ್ಲಿ ಆಡಳಿತಾರೂಢ ಎನ್ ಡಿಎ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಗದ್ದಲ, ಕೋಲಾಹಲವೇರ್ಪಡುವ ಸಾಧ್ಯತೆಯಿದೆ. ಎನ್ ಡಿಎಯ ಮಾಜಿ ಮೈತ್ರಿಪಕ್ಷ ಟಿಡಿಪಿ ಅವಿಶ್ವಾಸ ನಿರ್ಣಯವನ್ನು ಮಂಡಿಸಿದೆ.
Related Articles
ಮೇ 26ರಂದು 2ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ
May 23, 2019
Samachar Network-CLB
ರಾಷ್ಟ್ರೀಯ
Comments Off on ಮೇ 26ರಂದು 2ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ
Seen By: 66 ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನಲೆಯಲ್ಲಿ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಎರಡನೇ [more]
ಗಾರ್ಡನ್ ಸಿಟಿಯಾಗಿದ್ದ ಬೆಂಗಳೂರನ್ನು ಕಾಂಗ್ರೆಸ್ ಗಾರ್ಬೇಜ್ ಸಿಟಿಯನ್ನಾಗಿ ಮಾಡಿದೆ: ಬಿಜೆಪಿಗೆ ಅಧಿಕಾರ ನೀಡಿ ಸಿಲಿಕಾನ್ ಸಿಟಿಯ ಹಳೆ ವೈಭವ ಮರಳಿ ತರುತ್ತೇವೆ: ಪ್ರಧಾನಿ ಮೋದಿ
May 3, 2018
Samachar Network-CLB
ರಾಜ್ಯ, ರಾಷ್ಟ್ರೀಯ, ರಾಜಕೀಯ, ಪ್ರಧಾನಿ ಮೋದಿ
Comments Off on ಗಾರ್ಡನ್ ಸಿಟಿಯಾಗಿದ್ದ ಬೆಂಗಳೂರನ್ನು ಕಾಂಗ್ರೆಸ್ ಗಾರ್ಬೇಜ್ ಸಿಟಿಯನ್ನಾಗಿ ಮಾಡಿದೆ: ಬಿಜೆಪಿಗೆ ಅಧಿಕಾರ ನೀಡಿ ಸಿಲಿಕಾನ್ ಸಿಟಿಯ ಹಳೆ ವೈಭವ ಮರಳಿ ತರುತ್ತೇವೆ: ಪ್ರಧಾನಿ ಮೋದಿ
Seen By: 99 ಬೆಂಗಳೂರು:ಮೇ-3: ರಾಜ್ಯದ ಯುವ ಜನತೆ ಬೆಂಗಳೂರನ್ನು ಸಿಲಿಕಾನ್ ವ್ಯಾಲಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಕಳೆದ 5 ವರ್ಷಗಳಲ್ಲಿ ಆ ಹೆಸರನ್ನು ತೆಗೆದು ತಾಪದ [more]
ನಗರ ನಕ್ಸಲರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ: ಬಸ್ತಾರ್ ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ
November 9, 2018
Samachar Network-CLB
ರಾಷ್ಟ್ರೀಯ
Comments Off on ನಗರ ನಕ್ಸಲರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ: ಬಸ್ತಾರ್ ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ
Seen By: 75 ಬಸ್ತಾರ್: ವಿದೇಶಗಳಲ್ಲಿ ವಿದ್ಯಾಭ್ಯಾಸ ಪಡೆದು, ಎಸಿ ರೂಂ ನಲ್ಲಿ ಕುಳಿತು, ಐಷಾರಾಮಿ ಕಾರುಗಳಲ್ಲಿ ಓಡಾಡುವ ನಗರ ನಕ್ಸಲರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದ್ದು, ದೇಶದ [more]