ರೈತರ ಸಂಪೂರ್ಣ ಸಾಲ ಮನ್ನಾಗಾಗಿ ಬಿಜೆಪಿ ಪಾದಯಾತ್ರೆ

ರಾಮನಗರ:ಜು-೨೬: ಭಾರತೀಯ ಜನತಾ ಪಕ್ಷ ರಾಮನಗರ ಜಿಲ್ಲಾಧ್ಯಕ್ಷರಾದ ಸನ್ಮಾನ್ಯ ಶ್ರೀ ಎಂ.ರುದ್ರೇಶ್ ರವರ ನೇತೃತ್ವದಲ್ಲಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಸಹಕಾರದೊಂದಿಗೆ ನೆಡೆಯುತ್ತಿರುವ ರೈತರ ಸಂಪೂರ್ಣ ಸಾಲ ಮನ್ನಾ ಮತ್ತು ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಿಂದ ಪಾದಯಾತ್ರೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹೊನ್ನಾಳಿ ಶಾಸಕರಾದ ಎಂ.ಪಿ ರೇಣುಕಾಚಾರ್ಯರವರು, ಸೊರಬ ಶಾಸಕರಾದ ಕುಮಾರ್ ಬಂಗಾರಪ್ಪನವರು, ವಿಧಾನಪರಿಷತ್ ಸದಸ್ಯರು ಮತ್ತು ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್ ರವರು ರಾಮನಗರ ವಿಭಾಗದ ಉಸ್ತುವಾರಿಗಳಾದ ಸಚ್ಚಿದಾನಂದರವರು,ವಿಧಾನಪರಿಷತ್ ಸದಸ್ಯರಾದ ಅ.ದೇವೆಗೌಡರವರು, ತೇಜಶ್ವಿನಿ ರಮೇಶ್ ಗೌಡರವರು, ರೈತ ಸಂಘದ ಅಧ್ಯಕ್ಷರಾದ ಲಕ್ಷ್ಮಿ ನಾರಾಯಣಗೌಡರವರು,ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಿ.ಮರಿಸ್ವಾಮಿಯವರು.ಚಲನ ಚಿತ್ರ ನಟ ಶ್ರೀನಗರ ಕಿಟ್ಟಿಯವರು. ಭಾಗವಹಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ