ಕೇಂದ್ರ ಸರ್ಕಾರದ ಸಾಕ್ಷಿದಾರರ ರಕ್ಷಣೆ ಯೋಜನೆ ಕರಡು ಪ್ರಸ್ತಾವನೆಗೆ ಸಮ್ಮಿತಿ ನೀಡಿದ ಸುಪ್ರೀಂಕೋರ್ಟ್

ನವದೆಹಲಿ, ಡಿ.5- ಸಾಕ್ಷಿದಾರರ ರಕ್ಷಣೆ ಯೋಜನೆಗಾಗಿ ಕೇಂದ್ರ ಸರ್ಕಾರ ಸಿದ್ದಪಡಿಸಿರುವ ಕರಡು ಪ್ರಸ್ತಾವನೆಗೆ ಸುಪ್ರೀಂಕೋರ್ಟ್ ಇಂದು ಸಮ್ಮತಿ ನೀಡಿದೆ.
ಸಂಸತ್ತಿನಲ್ಲಿ ಈ ಸಂಬಂಧ ಒಂದು ಶಾಸನ ರೂಪಿಸುವ ತನಕ ಇದನ್ನು ಅನುಷ್ಠಾನಗೊಳಿಸುವಂತೆ ಎಲ್ಲ ರಾಜ್ಯಗಳಿಗೂ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ನ್ಯಾಯಮೂರ್ತಿ ಎ.ಕೆ.ಸಿಕ್ರಿ ನೇತೃತ್ವದ ಪೀಠ ಇಂದು ಸಾಕ್ಷಿದಾರರ ರಕ್ಷಣೆ ಮತ್ತು ಭದ್ರತೆ ಕುರಿತು ಕೇಂದ್ರದ ಕರಡು ಪ್ರಸ್ತಾವನೆಗೆ ಒಪ್ಪಿಗೆ ನೀಡಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ