ಕನ್ನಡ ಚಿತ್ರಪ್ರೇಮಿಗಳ ಸಂಘಧ ವತಿಯಿಂದ ಜ.2ರಂದು ರವೀಂದ್ರ ಕಲಾಕ್ಷೇತ್ರದಲ್ಲಿ 49ನೇ ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭ

ಬೆಂಗಳೂರು,ಡಿ.30- ದೊಮ್ಮಲೂರು ಬಡಾವಣೆಯ ಕನ್ನಡ ಚಿತ್ರಪ್ರೇಮಿಗಳ ಸಂಘದ ವತಿಯಿಂದ ಜನವರಿ 2ರಂದು ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ 49ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ.ಚಿನ್ನೇಗೌಡರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಕೆ.ಮೋಹನ್ದ್ೀವ್ ಆಳ್ವಾ ಅಧ್ಯಕ್ಷತೆ ವಹಿಸಲಿದ್ದಾರೆ.

ಅಭಿನಯ ಶಾರದೆ ನಟಿ ಜಯಂತಿ, ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಂಪರ್ಕ ಇಲಾಖೆ ನಿರ್ದೇಶಕ ಎಂ.ರವಿಕುಮಾರ್, ಮೇಯರ್ ಗಂಗಾಂಬಿಕೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್, ನಿರ್ದೇಶಕ ನಾಗಾಭರಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ನಿರ್ಮಾಪಕ ಎಂ.ದೇವೇಂದ್ರ ರೆಡ್ಡಿ ವಿಶೇಷ ಆಹ್ವಾನಿತರಾಗಿದ್ದು, ಸಂಘದ ಸದಸ್ಯರಾದ ಜಿ.ನಾರಾಯಣ್, ವಿ.ಆರ್.ಚಂದ್ರು,  ಟಿ.ಪದ್ಮರಾಜು, ವೈ.ಆರ್.ಕೃಷ್ಣಮೂರ್ತಿ, ಎಂ.ವಿಠಲರಾವ್, ಸಂಘದ ಉಪಾಧ್ಯಕ್ಷ ಅ.ತೀ.ರಂಗನಾಥ್ ಪಾಲ್ಗೊಳ್ಳಲಿದ್ದಾರೆ.

ಮಯೂರಿ ಮ್ಯೂಜಿಕ್ ಎಂಟರ್‍ಪ್ರೈಸಸ್‍ನ ಉಷಾ ಉಮೇಶ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ