ರಾಷ್ಟ್ರೀಯ ಯುವದಿನಾಚರಣೆ ಅಂಗವಾಗಿ ಆಮ್ ಆದ್ಮಿ ಪಕ್ಷದಿಂದ ವಿಶಿಷ್ಟ ಅಭಿಯಾನ

ಬೆಂಗಳೂರು, ಜ.12- ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಇಂದಿನಿಂದ ಬೊಂಬಾಟ್ ಬೆಂಗಳೂರು ಶ್ಯಾಡೋ ಕೌನ್ಸಿಲ್ ಎಂಬ ವಿಶಿಷ್ಟ ಅಭಿಯಾನವನ್ನು ಆಮ್ ಆದ್ಮಿ ಪಾರ್ಟಿ ಆರಂಭಿಸಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಬಿಬಿಎಂಪಿ ಪ್ರಚಾರ ಸಮಿತಿ ಮುಖ್ಯಸ್ಥೆ ಶಾಂತಲಾ ದಾಂಬ್ಲೆ ಸ್ವಾಮಿ ವಿವೇಕಾನಂದರ ದಿನಾಚರಣೆಯನ್ನು ರಾಷ್ಟ್ರೀಯ ಯುವ ದಿನಾಚರಣೆಯಾಗಿ ಆಚರಿಸಲಾಗುತ್ತಿದ್ದು, ನಮ್ಮ ನಗರವನ್ನು ಬೊಂಬಾಟ್ ಬೆಂಗಳೂರನ್ನಾಗಿ ಪರಿವರ್ತಿಸುವ ದೃಷ್ಟಿಯಿಂದ ಈ ಅಭಿಯಾನ ಆರಂಭಿಸಿರುವುದಾಗಿ ತಿಳಿಸಿದರು.

ಭ್ರಷ್ಟಾಚಾರ, ಪರಿಸರ ಮಾಲಿನ್ಯ, ನಶಿಸುತ್ತಿರುವ ಕೆರೆಗಳು, ಕುಡಿಯುವ ನೀರಿನ ಮಾಲಿನ್ಯ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಜನರಲ್ಲಿ ಅಭಿಯಾನದ ಮೂಲಕ ಜಾಗೃತಿ ಮೂಡಿಸಲಾಗುತ್ತದೆ.

ಪ್ರತಿ ವಾರ್ಡ್‍ಗೂ ಒಬ್ಬರಂತೆ ಯುವ ಕೌನ್ಸಿಲ್‍ಗಳನ್ನು ನೇಮಕ ಮಾಡಲಾಗಿದ್ದು, ಇವರಿಂದ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು.ಈಗಾಗಲೇ ಆರು ಜನರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಅಭಿಯಾನಕ್ಕೆ ಸೇರಲಿಚ್ಛಿಸುವ ಯುವಕ-ಯುವತಿಯರು 8884431214 ಕರೆ ಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ