ಪ್ರಯಾಗ್ ರಾಜ್‍ನ ಕುಂಭ ಮೇಳ ಸ್ಥಳದಲ್ಲಿ ಸಿಲಿಂಡರ್ ಸ್ಫೋಟ

ಅಲಹಾಬಾದ್, ಜ.14- ಉತ್ತರ ಪ್ರದೇಶದ ಅಲಹಾಬಾದ್‍ನ ಪ್ರಯಾಗ್ ರಾಜ್‍ನ ಕುಂಭ ಮೇಳ ಸ್ಥಳದಲ್ಲಿ ಇಂದು ಮಧ್ಯಾಹ್ನ ಸಿಲಿಂಡರ್ ಸ್ಫೋಟ ಮತ್ತು ಬೆಂಕಿಯಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಅದೃಷ್ಟವಶಾತ್ ಈ ಘಟನೆಯಲ್ಲಿ ಸಾವು-ನೋವು ಸಂಭವಿಸಿಲ್ಲ. ಕುಂಭ ಮೇಳದ ದಿಗಂಬರ ಅನಿಅಕಾಬಾದ ಟೆಂಟ್‍ನಲ್ಲಿ ಸಿಲಿಂಡರ್ ಸ್ಫೋಟವಾಗಿ ಬೆಂಕಿ ಹೊತ್ತಿಕೊಂಡಿತು.

ಸುದ್ದಿ ತಿಳಿದು ತಕ್ಷಣ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ