ವೈ.ಎಸ್.ವಿ.ದತ್ತರವರಿಂದ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರ

ಬೆಂಗಳೂರು, ಜ.28-ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ವಿದ್ಯುಕ್ತವಾಗಿ ಇಂದು ಅಧಿಕಾರ ಸ್ವೀಕರಿಸಿದರು. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚಾರ ಸಮಿತಿ ಜವಾಬ್ದಾರಿ ಸ್ವೀಕಾರ ಮಾಡಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ವಿ.ಶ್ವನಾಥ್ ಸಮ್ಮುಖದಲ್ಲಿ ಪಕ್ಷದ ಬಾವುಟ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ವಕ್ತಾರ ರಮೇಶ್‍ಬಾಬು, ದತ್ತ ಅವರು ರಾಜಕೀಯವಾಗಿ ನಡೆದು ಬಂದ ಹಾದಿ ಎಲ್ಲರಿಗೂ ತಿಳಿದಿದೆ.ಸರಳ, ಸಜ್ಜನಿಕೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದರು.

ಶಿಕ್ಷಕ ವೃತ್ತಿಯಿಂದ ಎಲ್ಲರೊಂದಿಗೆ ಸಹಜವಾಗಿ ಬೆರೆಯುವ ಸ್ವಭಾವದವರಾದ ಅವರು ಜೆಪಿ ಚಳವಳಿಯಲ್ಲೂ ಭಾಗವಹಿಸಿದ್ದರು.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಪಕ್ಷದ ಕಾರ್ಯದಲ್ಲಿ ಸಕ್ರಿಯರಾಗಿ, ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಗುಣಗಾನ ಮಾಡಿದರು.

ಈ ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಯ್ಯ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ರಮೇಶ್‍ಗೌಡ, ಮಾಜಿ ಶಾಸಕ ಕೋನರೆಡ್ಡಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಪಕ್ಷದ ವರಿಷ್ಠರು, ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ