ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮೋದಿಯವರನ್ನು ಮತ್ತೆ ಪ್ರಧಾನ ಮಂತ್ರಿ ಮಾಡೋಣ: ಶಾಸಕ ಅರವಿಂದ ಲಿಂಬಾವಳಿ

ಬೆಂಗಳೂರು,ಜ.28-ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನ ಮಂತ್ರಿ ಮಾಡಿ ಸುಭದ್ರ ಭಾರತ ನಿರ್ಮಾಣ ಮಾಡೋಣ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ವೈಟ್‍ಫೀಲ್ಡ್‍ನ ಐಟಿಪಿಎಲ್ ಬಳಿ ಹಮ್ಮಿಕೊಂಡಿದ್ದ ಭಾರತ ಮಾತಾ ಪೂಜೆ ಹಾಗೂ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದ ಮೇಲೆ ದೇಶದ ಪ್ರಗತಿ ವೇಗವಾಗಿ ಸಾಗುತ್ತಿದೆ.ಇನ್ನೂ ಐದು ವರ್ಷ ಮೋದಿಗೆ ಅಧಿಕಾರ ನೀಡಿದರೆ ದೇಶದ ಅಭಿವೃದ್ಧಿಗೆ ಇನ್ನಷ್ಟು ಪ್ರಗತಿಯಾಗುವುದರಲ್ಲಿಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

ಬೇರೆ ರಾಜ್ಯಗಳಿಂದ ಬಂದವರು ಇಲ್ಲಿನ ಸಂಸ್ಕøತಿ ಹೊಂದಿಕೊಂಡು ಬೆರೆತು ಜೀವನ ಸಾಗಿಸಬೇಕು.ಜೀವನದಲ್ಲಿ ಶಿಸ್ತು ಕಾಪಾಡಿಕೊಂಡು ಹೋಗಬೇಕು ಎಂದರು.

ಸಂಸದ ಪಿ.ಸಿ.ಮೋಹನ್ ಮಾತನಾಡಿ, ಬೆಂಗಳೂರಿನಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಕ್ಷೇತ್ರ ಮಹದೇವಪುರ ಕ್ಷೇತ್ರ. ಇಲ್ಲಿ ಎಲ್ಲಾ ಜನಾಂಗದವರೂ ವಾಸಿಸುತ್ತಿದ್ದಾರೆ ಎಂದರು.

ಬೆಂಗಳೂರಿನ ಸಬರ್ಬನ್‍ಗೆ ನರೇಂದ್ರ ಮೋದಿ ಅವರು 17 ಸಾವಿರ ಕೋಟಿ ರೂ.ನೀಡಿದ್ದಾರೆ.ಅಲ್ಲದೆ ಕರ್ನಾಟಕದ ಕೆರೆಗಳ ಅಭಿವೃದ್ಧಿಗೆ 2500 ಕೋಟಿ ರೂ.ನೀಡಿದ್ದಾರೆ ಎಂದು ಹೇಳಿದರು.

ಇಂದಿನ ಯೂತ್‍ಐಕಾನ್ ನರೇಂದ್ರ ಮೋದಿ ಅವರು, ಇವರನ್ನು ಮತ್ತೆ ಪ್ರಧಾನಿ ಮಾಡಲು ಪ್ರತಿಯೊಬ್ಬರೂ ಕೈ ಜೋಡಿಸಬೇಕುಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕøತಿ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬರಿಗೂ ನೆನಪಿನ ಕಾಣಿಕೆ ನೀಡಲಾಯಿತು.

ಪಾಲಿಕೆ ಸದಸ್ಯ ಎಸ್.ಮುನಿಸ್ವಾಮಿ, ಕ್ಷೇತ್ರಾಧ್ಯಕ್ಷರಾಜಾರೆಡ್ಡಿ ಮಾಜಿ ಅಧ್ಯಕ್ಷರಾದ ವೆಂಕಟಸ್ವಾಮಿ ರೆಡ್ಡಿ, ಜಯಚಂದ್ರರೆಡ್ಡಿ, ಜಂಟಿ ಆಯುಕ್ತ ಜಗದೀಶ್, ಯುವ ಮೋರ್ಚಾ ಅಧ್ಯಕ್ಷ ರಾಜೇಶ್, ಮುಖಂಡರಾದ ಅನಂತರಾಮಯ್ಯ, ಹೂಡಿ ಮಂಜು, ಮಹೇಂದ್ರ ಮೋದಿ, ಕಬಡ್ಡಿ ಪಿಳ್ಳಪ್ಪ, ನಟರಾಜ್, ಚನ್ನಸಂದ್ರ ಚಂದ್ರಶೇಖರ್ ಮತ್ತಿತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ