ಹಿಂದೂ ಮಹಾಸಾಗರದಲ್ಲಿ ಕಡಿಮೆ ವಾಯುಭಾರ ಕೇರಳ ಭಾಗದ ಕರಾವಳಿಯಲ್ಲಿ ಕಟ್ಟೆಚ್ಚರ

ಹಿಂದೂ ಮಹಾಸಾಗರದಲ್ಲಿ ಕಡಿಮೆ ವಾಯುಭಾರ ಒತ್ತಡ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ ಭಾಗದ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ತಿರುವನಂತಪುರಂನಲ್ಲಿ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಬಾರದು ಎಂದು ಸೂಚಿಸಲಾಗಿದ್ದು, ನೌಕಾಪಡೆ ಮತ್ತು ಕರಾವಳಿ ಭದ್ರತಾ ಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಕರಾವಳಿಯಲ್ಲಿ ಕಡಿಮೆ ವಾಯುಭಾರ ಒತ್ತಡ ತೀವ್ರಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಸೂಚನೆ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಕಳೆದ ನವಂಬರ್‍ನಲ್ಲಿ ಓಖಿ ಚಂಡಮಾರುತ ಕೇರಳ, ತಮಿಳುನಾಡು ಹಾಗೂ ಲಕ್ಷದ್ವೀಪಕ್ಕೆ ಅಪ್ಪಳಿಸಿತ್ತು. ಇದರ ಪರಿಣಾಮ ಹಲವಾರು ಮೀನುಗಾರರು ಜೀವ ಕಳೆದುಕೊಂಡಿದ್ದು, ಕೆಲವು ಮಂದಿ ಕಾಣೆಯಾಗಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ