ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

ದೆಹಲಿ,ಫೆ.06-ಒಡಿಶಾದ ಬಿಜೆಡಿ ಲೋಕಸಭಾ ಸಂಸದ ಶ್ರೀ ಲಾಡು ಕಿಶೋರ್ ಸ್ವೇನ್ ನಿಧನ ಹಿನ್ನಲೆಯಲ್ಲಿ ಸದನದಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಲೋಕಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ಬಿಜೆಡಿ ಸಂಸದ ಸ್ವೇನ್ ಅವರು ಇಂದು ಭುವನೇಶ್ವರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರು ಅಸ್ಕಾ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಚುನಾಯಿತರಾಗಿದ್ದರು. ಮತ್ತು 2004 ರಿಂದ 2009 ರವರೆಗೆ ಒಡಿಶಾ ವಿಧಾನಸಭೆಯ ಸದಸ್ಯರಾಗಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ