ರಸ್ತೆ ದಾಟುವಾಗ ಕೂಲಿ ಕಾರ್ಮಿಕನಿಗೆ ಬೈಕ್ ಡಿಕ್ಕಿ: ಘಟನೆಯಲ್ಲಿ ಕೂಲಿಕಾರ್ಮಿಕನ ಸಾವು

ಬೆಂಗಳೂರು, ಫೆ.13- ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಕೆಆರ್ ಪುರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿಜನಾಪುರದ ನಿವಾಸಿ ಭಾಷಾಸಾಬ್ (50) ಮೃತಪಟ್ಟ ಕಾರ್ಮಿಕ.

ನಿನ್ನೆ ರಾತ್ರಿ 7.30ರ ಸಮಯದಲ್ಲಿ ಭಾಷಾಸಾಬ್ ಕೆಲಸ ಮುಗಿಸಿಕೊಂಡು ಹೋಗುತ್ತಿದ್ದರು.

ಕಸ್ತೂರಿ ನಗರದ ಸ್ಕೈ ವಾಕ್ ಕೆಳಗಡೆ ಭಾಷಾ ಅವರು ರಸ್ತೆ ದಾಟುತ್ತಿದ್ದಾಗ ಅತಿ ವೇಗವಾಗಿ ಮುನ್ನುಗ್ಗಿದ ಬೈಕ್ ಇವರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಭಾಷಾ ಗಂಭೀರ ಗಾಯಗೊಂಡರು.ತಕ್ಷಣ ಸ್ಥಳೀಯರ ನೆರವಿನಿಂದ ಕೆಆರ್ ಪುರ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತದೇಹವನ್ನು ಬೌರಿಂಗ್ ಆಸ್ಪತ್ರೆಯಲ್ಲಿಡಲಾಗಿದೆ.ಈ ಬಗ್ಗೆ ಕೆಆರ್ ಪುರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ