ಸರಣಿ ಅಪಘಾತ-ಘಟನೆಯಲ್ಲಿ ಇಬ್ಬರ ಸಾವು

ಮೈಸೂರು, ಫೆ.25- ಅತಿವೇಗವಾಗಿ ಮುನ್ನುಗಿದ ಕಾರೊಂದು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಮುಂದೆ ಹೋಗುತ್ತಿದ್ದ ಮತ್ತೊಂದು ವಾಹನಕ್ಕೆ ಅಪ್ಪಳಿಸಿ ಸರಣಿ ಅಪಘಾತ ಸಂಭವಿಸಿದ್ದರಿಂದ ವಿಕಲಚೇತನ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ವರುಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿಕಲಚೇತನ ತಿಮ್ಮಯ್ಯ (65) ಮತ್ತು ಅಸ್ಗರ್ ಪಾಷಾ (40) ಮೃತಪಟ್ಟ ದುರ್ದೈವಿಗಳು.

ನಿನ್ನೆ ಸಂಜೆ ಮೈಸೂರು-ನರಸೀಪುರ ರಸ್ತೆಯ ವಾಜಮಂಗಲ ಗೇಟ್ ಬಳಿ ತಿಮ್ಮಯ್ಯ ತಮ್ಮ ವಾಹನದಲ್ಲಿ ತೆರಳುತ್ತಿದ್ದರೆ, ಅಸ್ಗರ್ ಪಾಷಾ ಗೂಡ್ಸ್ ಆಟೋದಲ್ಲಿ ಹೋಗುತ್ತಿದ್ದರು.

ಈ ವೇಳೆ ಹಿಂದಿನಿಂದ ಅತಿವೇಗವಾಗಿ ಮುನ್ನುಗ್ಗಿದ ಕಾರೊಂದು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋ ನಿಯಂತ್ರಣ ಕಳೆದುಕೊಂಡು ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಿಮ್ಮಯ್ಯ ಹಾಗೂ ಅಸ್ಗರ್ ಪಾಷಾ ಗಂಭೀರ ಗಾಯಗೊಂಡರು.

ತಕ್ಷಣ ಸಾರ್ವಜನಿಕರು ಹಾಗೂ ಪೊಲೀಸರು ಇವರಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ವರುಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ