ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ-ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್

ಮುಂಬೈ, ಮಾ.13- ಲೋಕಸಭಾ ಚುನಾವಣೆ ರಂಗೇರುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಪರಸ್ಪರ ಆರೋಪ ಪ್ರತ್ಯರೋಪಗಳ ಸುರಿಮಳೆ ಆಗುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು ಆದರೆ, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಭವಿಷ್ಯ ನುಡಿದ್ದಾರೆ.

ಮುಂಬೈನಲ್ಲಿ ಮಾತನಾಡಿದ ಶರದ್ ಪವಾರ್ ಅವರು, ಈ ಬಾರಿಯ ಲೋಕಸಭಾ ಚುನಾವಣೆ ಬಿಜೆಪಿ ಮತ್ತು ನರೇಂದ್ರ ಮೋದಿಗೆ ಕಬ್ಬಿಣದ ಕಡಲೆಯಾಗಲಿದೆ.

ಬಿಜೆಪಿಗೆ ಈ ಬಾರಿ ಸ್ಪಷ್ಟ ಬಹುಮತ ಖಂಡಿತಾ ಸಿಗುವುದಿಲ್ಲ, ಆದರೆ ಸೀಟುಗಳ ಆಧಾರದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದೇ ಹೊರತು, ಅದಕ್ಕೆ ಸ್ಪಷ್ಟ ಬಹುಮತ ಸಿಗುವುದಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ಅಧಿಕಾರ ರಚನೆಗೆ ಮೈತ್ರಿ ಪಕ್ಷಗಳ ಬೆಂಬಲ ಅತ್ಯಗತ್ಯ ಎಂದು ಹೇಳಿರುವ ಶರದ್ ಪವಾರ್, ನರೇಂದ್ರ ಮೋದಿ 2ನೇ ಬಾರಿಗೆ ಪ್ರಧಾನಿಯಾಗಲು ಸಾಧ್ಯವಿಲ್ಲ. ಬಿಜೆಪಿಗೆ ಬೆಂಬಲ ನೀಡುವ ಇತರೆ ಪಕ್ಷಗಳು ನರೇಂದ್ರ ಮೋದಿ ಹೊರತಾಗಿ ಬೇರೆ ನಾಯಕರನ್ನು ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಬಹುದು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ