ಬೈಸಿಕಲ್‍ಗೆ ವಾಹನ ಡಿಕ್ಕಿ ಯುವಕ ಸಾವು:

ಬೆಂಗಳೂರು, ಮಾ.30- ಬೈಸಿಕಲ್‍ಗೆ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟಿರುವ ಘಟನೆ ಅಶೋಕನಗರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಪಶ್ವಿಮ ಬಂಗಾಳದವನಾದ ಸುಮಿತ್(25) ಮೃತಪಟ್ಟ ದುರ್ದೈವಿ.
ಈತ ಇಂದು ಬೆಳಗಿನ ಜಾವ ಸುಮಾರು 1.30ರಲ್ಲಿ ಸಿಎಂಟಿ ಜಂಕ್ಷನ್‍ನಲ್ಲಿ ಬೈಸಿಕಲ್‍ನಲ್ಲಿ ಹೋಗುತ್ತಿದ್ದ. ಈ ವೇಳೆ ಯಾವುದೋ ವಾಹನ ಡಿಕ್ಕಿ ಹೊಡೆದಿದೆ. ವಾಹನ ಸಹಿತ ಚಾಲಕ ಪರಾರಿಯಾಗಿದ್ದಾನೆ. ವಾಹನ ಡಿಕ್ಕಿ ಹೊಡೆದ ಕೂಡಲೇ ಸುಮಿತ್ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ, ತಕ್ಷಣ ಅವನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಮೃತಪಟ್ಟಿದ್ದಾನೆ. ಅಶೋಕನಗರ ಸಂಚಾರಿ ಠಾಣೆ ಪೆÇಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ