ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿರುವ “ಕನ್ನಡ ಕಾಯಕ ವರ್ಷಾಚರಣೆ 2020 ರ ಲಾಂಛನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಇಂದು ವಿಧಾನಸೌಧದಲ್ಲಿ ಬಿಡುಗಡೆಗೊಳಿಸುವ ಮೂಲಕ ಕನ್ನಡ ಕಾಯಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಟಿ.ಎಸ್. ನಾಗಾಭರಣ, ಒಂದು ವರ್ಷ ಪೂರ್ತಿ ಅರ್ಥಪೂಣವಾಗಿ ಈ ಕಾರ್ಯಕ್ರಮ ಆಚರಿಸಲು ಹಲವು ಪ್ರತ್ಯೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರ ಸಹಭಾಗಿತ್ವ ಬಹಳ ಮುಖ್ಯವಾಗಿದೆ ಎಂದರು. ಸರ್ಕಾರಿ ಮುದ್ರಣಾಲಯ ಹಾಗೂ ಸರ್ಕಾರಿ ಇಲಾಖೆಗಳು ಮುದ್ರಿಸುವ ತಲೆಬರಹಗಳು ನಮೂನೆಗಳು, ಪೂರಕ ಸಾಮಗ್ರಿಗಳು, ಪ್ರಕಟಣೆಗಳು, ಜಾಹಿರಾತುಗಳಲ್ಲಿ ಕನ್ನಡ ಕಾಯಕ ವರ್ಷ ಲಾಂಛನವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಹೊರರಾಜ್ಯ ಮತ್ತು ಹೊರದೇಶದ ಜನರಿಗೆ ಕನ್ನಡ ಕಲಿಸುವ ನಿಟ್ಟಿನಲ್ಲಿ “ಅಪಾರ್ಟ್ಮೆಂಟ್ ಗಳಲ್ಲಿ ಕನ್ನಡ ಕಲಿಕೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಒಟ್ಟಾರೆಯಾಗಿ ಕನ್ನಡ ಕಾಯಕ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಟಿಬದ್ಧವಾಗಿರುವುದಾಗಿ ಟಿ.ಎಸ್. ನಾಗಾಭರಣ ನುಡಿದರು
Related Articles
ಕ್ಷೇತ್ರದ ಜನರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ: ಮಂಡ್ಯ ಸಂಸದೆ ಸುಮಲತಾ
May 26, 2019
Samachar Network-CLB
ರಾಜ್ಯ
Comments Off on ಕ್ಷೇತ್ರದ ಜನರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ: ಮಂಡ್ಯ ಸಂಸದೆ ಸುಮಲತಾ
Seen By: 72 ಬೆಂಗಳೂರು: ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದವರು ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಲಾಗದು, ಒಂದು ಪಕ್ಷಕ್ಕೆ ಬೆಂಬಲ [more]
ಸಿದ್ದುಗೆ ರೇಣುಕಾಚಾರ್ಯ ತಿರುಗೇಟು ನಿಮ್ಮ ತಟ್ಟೆಯಲ್ಲೇನಿದೆ ನೋಡಿಕೊಳ್ಳಿ
November 27, 2020
Varta Mitra News - SP
ರಾಜ್ಯ, ರಾಜಕೀಯ
Comments Off on ಸಿದ್ದುಗೆ ರೇಣುಕಾಚಾರ್ಯ ತಿರುಗೇಟು ನಿಮ್ಮ ತಟ್ಟೆಯಲ್ಲೇನಿದೆ ನೋಡಿಕೊಳ್ಳಿ
Seen By: 53 ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾಗುತ್ತಾರೆ ಎಂದು ಹೇಳಿಕೆ ನೀಡಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. [more]
ಆಪರೇಶನ್ ಕಮಲ ಮಾಡುವುದಾಗಿ ನಾನು ಹೇಳಿಲ್ಲ, ನಮ್ಮ ನಾಯಕರೂ ಹೇಳಿಲ್ಲ: ಬಿಎಸ್ವೈ
December 27, 2018
Samachar Network-CLB
ರಾಜ್ಯ
Comments Off on ಆಪರೇಶನ್ ಕಮಲ ಮಾಡುವುದಾಗಿ ನಾನು ಹೇಳಿಲ್ಲ, ನಮ್ಮ ನಾಯಕರೂ ಹೇಳಿಲ್ಲ: ಬಿಎಸ್ವೈ
Seen By: 71 ವಿಜಯಪುರ: ಆಪರೇಷನ್ ಕಮಲ ಮಾಡುವುದಾಗಿ ನಾನು ಹೇಳಿಲ್ಲ. ನಮ್ಮ ನಾಯಕರೂ ಹೇಳಿಲ್ಲ. ಕಾಂಗ್ರೆಸ್-ಜೆಡಿಎಸ್ ಸರ್ಕಾರ ಕಚ್ಚಾಡಿಕೊಂಡು ಬಿದ್ದರೆ ಮುಂದೆ ಯೋಚಿಸುತ್ತೇವೆ ಎಂದು ಬಿಜೆಪಿ [more]