ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮತ ಎಣಿಕೆಗೆ 14 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ಗೆ ಒಬ್ಬ ಎಣಿಕೆ ಸೂಪರ್ವೈಸರ್, ಒಬ್ಬ ಎಣಿಕೆ ಸಹಾಯಕ ಹಾಗೂ ಒಬ್ಬ ಮೈಕ್ರೋ ಅಬ್ಸರ್ವರ್ನ್ನು ನೇಮಕ ಮಾಡಲಾಗಿದೆ. ಅಂಚೆ ಮತಯಂತ್ರ ಹಾಗೂ ಸರ್ವೀಸ್ ವೋಟ್ಗಳ ಎಣಿಕೆಯು 4 ಟೇಬಲ್ಗಳಲ್ಲಿ ನಡೆಯಲಿದೆ. ಸುಮಾರು 24 ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿ ಟೇಬಲ್ಗೆ ಒಬ್ಬ ಅಭ್ಯರ್ಥಿಗೆ ಒಬ್ಬ ಏಜೆಂಟ್ ನಂತೆ ಹಾಜರಿರಲು ಅವಕಾಶ ನೀಡಲಾಗುವುದು. ಈಗಾಗಲೇ ಮತ ಎಣಿಕೆ ಏಜೆಂಟರುಗಳಿಗೆ ಪಾಸ್ ವಿತರಿಸಲಾಗಿದೆ. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರುಗಳಿಗೆ ಮತ ಎಣಿಕಾ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುವುದು. ಅಭ್ಯರ್ಥಿಗಳ ಅನುಕೂಲಕ್ಕಾಗಿ ಎಣಿಕಾ ಕೇಂದ್ರದ ಆವರಣದಲ್ಲಿ ಅಭ್ಯರ್ಥಿಗಳ ಕೊಠಡಿಯನ್ನು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರವನ್ನು ಮತ ಎಣಿಕೆಗೂ ಮುನ್ನ ಮತ್ತು ಮತ ಎಣಿಕೆಯ ನಂತರ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುವುದು. ಕೇಂದ್ರಕ್ಕೆ ಆಗಮಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Related Articles
Seen By: 38 ನಾಳೆ ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ. ಈ ಎರಡೂ ಕ್ಷೇತ್ರಗಳಿಗೆ ನವೆಂಬರ್ [more]
ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್ ಮುಳುಗುವ ಹಡಗು: ಕಟೀಲು ಟೀಕೆ ಬಿಜೆಪಿ ಆಡಳಿತದ ಬಗ್ಗೆ ಜನರಲ್ಲಿ ಹೆಚ್ಚು ವಿಶ್ವಾಸ
November 9, 2020
Varta Mitra News - SP
ತುಮಕೂರು, ರಾಜ್ಯ, ರಾಜಕೀಯ
Comments Off on ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್ ಮುಳುಗುವ ಹಡಗು: ಕಟೀಲು ಟೀಕೆ ಬಿಜೆಪಿ ಆಡಳಿತದ ಬಗ್ಗೆ ಜನರಲ್ಲಿ ಹೆಚ್ಚು ವಿಶ್ವಾಸ
Seen By: 75 ತುಮಕೂರು: ಕಾಂಗ್ರೆಸ್ ಇಂದು ಮುಳುಗುವ ಹಡಗಾಗಿದೆ. ಆದರೆ, ಭಾರತೀಯ ಜನತಾ ಪಾರ್ಟಿ ದೇಶದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ಓಡುವ ಹಡಗಾಗಿದೆ. [more]
ನ.23ರಿಂದ ಮೂರು ದಿನ ಯುವಜನೋತ್ಸವ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
November 1, 2018
Samachar Network-CLB
ರಾಜ್ಯ
Comments Off on ನ.23ರಿಂದ ಮೂರು ದಿನ ಯುವಜನೋತ್ಸವ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
Seen By: 93 ತುಮಕೂರು: ರಾಜ್ಯಮಟ್ಟದ ಯುವಜನೋತ್ಸವವನ್ನು ನವೆಂಬರ್23,24 ಹಾಗೂ 25 ರಂದು ನಗರದ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ [more]