ಈ ಬಾರಿ ದೇಶದ ಜನತೆ ಸ್ಥಳೀಯ ಉತ್ಪನ್ನಗಳನ್ನು ಖರೀದಿಸುವ ಮೂಲಕ ದೀಪಾವಳಿ ಆಚರಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸ್ಥಳೀಯ ಉತ್ಪನ್ನಗಳ ಮೂಲಕ ದೀಪಾವಳಿ ಎಂಬ ಘೋಷವಾಕ್ಯದಡಿ ಜನತೆ ಸ್ಥಳೀಯ ಉತ್ಪನ್ನಗಳನ್ನು ಬಳಸಿ ಹಬ್ಬ ಆಚರಿಸಬೇಕೆಂದು ಹೇಳಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿ 30 ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ನೆರವೇರಿಸಿ, ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಮಾತನಾಡಿದ ಅವರು, ಪೂರ್ವಾಂಚಲ ಭಾಗದ ರೈತರು ಅತಿ ಹೆಚ್ಚು ಉತ್ಪನ್ನಗಳನ್ನು ಈ ಬಾರಿ ಬೆಳೆದಿದ್ದು, ಕೋವಿಡ್ -19 ಸಂಕಷ್ಟ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಅದರಲ್ಲೂ ಪ್ರಮುಖವಾಗಿ ವಾರಾಣಸಿ ಆರೋಗ್ಯ ಸೌಲಭ್ಯಗಳ ಕೇಂದ್ರವಾಗಿ ಹೊರಹೊಮ್ಮಿದೆ. ಕೇವಲ ಪೂರ್ವಾಂಚಲ ಭಾಗವಷ್ಟೇ ಅಲ್ಲದೆ, ಇಡೀ ದೇಶಕ್ಕೆ ವಾರಾಣಸಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ನಗರವಾಗಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಾಶಿನಗರದಲ್ಲಿ ಪ್ರಸ್ತುತ 8 ಸಾವಿರದ 900 ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈವರೆಗೆ 18 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳು ಮಂಜೂರಾಗಿವೆ ಎಂದು ಹೇಳಿದರು.
Related Articles
ಮಹಾತ್ಮ ಗಾಂಧಿ ಕಾಂಗ್ರೆಸ್ಸನ್ನು ಅಂತ್ಯಗೊಳಿಸಲು ಬಯಸಿದ್ದರು: ಪ್ರಧಾನಿ ಮೋದಿ
March 12, 2019
Samachar Network-NP
ರಾಷ್ಟ್ರೀಯ, ರಾಜಕೀಯ, ಪ್ರಧಾನಿ ಮೋದಿ
Comments Off on ಮಹಾತ್ಮ ಗಾಂಧಿ ಕಾಂಗ್ರೆಸ್ಸನ್ನು ಅಂತ್ಯಗೊಳಿಸಲು ಬಯಸಿದ್ದರು: ಪ್ರಧಾನಿ ಮೋದಿ
Seen By: 47 ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಬ್ಲಾಗ್ ಮುಖಾಂತರ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದ್ದಾರೆ. ಮಹಾತ್ಮ ಗಾಂಧಿಯವರ ದಂಡಿ ಉಪ್ಪಿನ ಸತ್ಯಾಗ್ರಹವನ್ನು ಉಲ್ಲೇಖಿಸಿ, [more]
ದೇಶದಲ್ಲಿ ಸಿಂಹಗಳ ಸಂತತಿ ಹೆಚ್ಚಾಗುತ್ತಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ
August 11, 2021
Varta Mitra News - SP
ರಾಷ್ಟ್ರೀಯ
Comments Off on ದೇಶದಲ್ಲಿ ಸಿಂಹಗಳ ಸಂತತಿ ಹೆಚ್ಚಾಗುತ್ತಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ
Seen By: 307 ನವದೆಹಲಿ,ಆ.10-ಕಳೆದ ಕೆಲ ವರ್ಷಗಳಿಂದ ದೇಶದಲ್ಲಿ ಸಿಂಹಗಳ ಸಂತತಿ ಹೆಚ್ಚಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಿಂಹಗಳ ಸಂತತಿ [more]
ಪೆಗಾಸಸ್ ಗೂಢಚರ್ಯೆ ವಿಪಕ್ಷ ಆರೋಪ: ಆಧಾರರಹಿತ ಗುಲ್ಲು
July 26, 2021
Varta Mitra News - SP
ರಾಷ್ಟ್ರೀಯ
Comments Off on ಪೆಗಾಸಸ್ ಗೂಢಚರ್ಯೆ ವಿಪಕ್ಷ ಆರೋಪ: ಆಧಾರರಹಿತ ಗುಲ್ಲು
Seen By: 84 ಪೆಗಾಸಸ್ ಗೂಢಚರ್ಯೆ ಕುರಿತಂತೆ ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪ ಆಧಾರರಹಿತ ಗುಲ್ಲಾಗಿದೆ. ವಿರೋಧಪಕ್ಷಗಳಿಗೆ ಜನರ ಮುಂದೆ ಒಯ್ಯಲು ಯಾವುದೇ ವಿಷಯವಿಲ್ಲದ್ದರಿಂದ ಅವರು ಈ [more]