ದೇಶಾದ್ಯಂತ ಇದೇ 16ರಂದು ಕೋವಿಡ್-19 ಲಸಿಕಾ ಆಂದೋಲನ ಆರಂಭವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಿ, ಕೋವಿಡ್-19 ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ ನೀಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಿರುವ ಸಿದ್ಧತೆಯ ಪರಿಶೀಲನೆ ನಡೆಸಿದರು. ಈ ಮಹತ್ವದ ಸಭೆಯಲ್ಲಿ ಸಂಪುಟ ಕಾರ್ಯದರ್ಶಿ, ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ ಮತ್ತು ನಾನಾ ಇಲಾಖೆಗಳ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು. ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳಿಗೆ ಆರೋಗ್ಯ ನಿಯಂತ್ರಣ ಸಂಸ್ಥೆ ಅನುಮೋದನೆ ನೀಡಿದ್ದು, ಇವು ಸಂಪೂರ್ಣ ಸುರಕ್ಷಿತ ಮತ್ತು ಸೋಂಕು ನಿಯಂತ್ರಣ ಶಕ್ತಿ ಹೊಂದಿವೆ ಎಂದು ಸಭೆ ಅನುಮೋದಿಸಿದೆ. ಕೋವಿಡ್-19 ಲಸಿಕೆ ನೀಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಡೆಸಿರುವ ಸಿದ್ಧತೆ ಕುರಿತು ಸಮಾಲೋಚನೆ ನಡೆಸಿದ ಪ್ರಧಾನಂತ್ರಿ ಅವರು, ಜನರ ಪಾಲ್ಗೊಳ್ಳುವಿಕೆ, ಚುನಾವಣಾ ಅನುಭವದ ಬಳಕೆ ಮತ್ತು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮಗಳ ತತ್ವಗಳನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ದೇಶಾದ್ಯಂತ ಸುಮಾರು 3 ಕೋಟಿ ಆರೋಗ್ಯ ಸಂರಕ್ಷಣಾ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು. ಎರಡನೇ ಹಂತದಲ್ಲಿ 50 ವರ್ಷ ದಾಟಿದವರಿಗೆ ಸೋಂಕಿತರಿಗೆ ಮತ್ತು ಮೂರನೇ ಹಂತದಲ್ಲಿ 50 ವರ್ಷದೊಳಗಿನ ಗುಂಪುಗಳಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಕೋ-ವಿನ್ ಲಸಿಕಾ ವಿತರಣೆ ನಿರ್ವಹಣೆ ವ್ಯವಸ್ಥೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು ಈಗಾಗಲೇ 79 ಲಕ್ಷಕ್ಕಿಂತ ಹೆಚ್ಚಿನ ಫಲಾನುಭವಿಗಳು ಇದರಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
Related Articles
ಮೊದಲ ತ್ರೈಮಾಸಿಕದಿಂದ ಚೇತರಿಸಿಕೊಂಡ ದೇಶದ ಆರ್ಥಿಕತೆ 2021ರಲ್ಲಿ ಚೀನಾ ಜಿಡಿಪಿ ಮೀರಿಸಲಿದೆ ಭಾರತ !
October 15, 2020
Varta Mitra News - SP
ರಾಷ್ಟ್ರೀಯ, ಅಂತರರಾಷ್ಟ್ರೀಯ
Comments Off on ಮೊದಲ ತ್ರೈಮಾಸಿಕದಿಂದ ಚೇತರಿಸಿಕೊಂಡ ದೇಶದ ಆರ್ಥಿಕತೆ 2021ರಲ್ಲಿ ಚೀನಾ ಜಿಡಿಪಿ ಮೀರಿಸಲಿದೆ ಭಾರತ !
Seen By: 59 ವಾಷಿಂಗ್ಟನ್: ಕೋವಿಡ್ ಬಿಕ್ಕಟ್ಟಿನಿಂದ ಜಗತ್ತಿನ ಇತರ ದೇಶಗಳಂತೆಯೇ ಭಾರತದ ಆರ್ಥಿಕತೆಗೂ ಹಿಂಜರಿತ ಉಂಟಾಗಿದ್ದು, ಈ ವರ್ಷ ಜಿಡಿಪಿ ಮೈನಸ್ ಶೇ.10.5ಕ್ಕೆ ಕುಸಿಯಲಿದೆ .ಆದರೆ [more]
ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಕಂಪೆನಿಗಳ ಜೇನುತುಪ್ಪ ಕಲಬೆರಕೆಯದ್ದು; ಕೇಂದ್ರ ಸರ್ಕಾರ
December 4, 2020
Varta Mitra News - SP
ರಾಷ್ಟ್ರೀಯ, ಆರೋಗ್ಯ, ಮತ್ತಷ್ಟು
Comments Off on ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಕಂಪೆನಿಗಳ ಜೇನುತುಪ್ಪ ಕಲಬೆರಕೆಯದ್ದು; ಕೇಂದ್ರ ಸರ್ಕಾರ
Seen By: 48 ನವದೆಹಲಿ: ಭಾರತೀಯ ಆಹಾರ ಪರಂಪರೆಯಲ್ಲಿ ಜೇನು ತುಪ್ಪಕ್ಕೆ ವಿಶೇಷ ಸ್ಥಾನಮಾನಗಳಿವೆ. ಆಯುರ್ವೇದ ಪದ್ಧತಿಯಲ್ಲಿ ಔಷಧಿಯಾಗಿ ಹಾಗೂ ಸೌಂದರ್ಯವರ್ಧಕ ವಸ್ತುಗಳಲ್ಲಿ ಜೇನು ತುಪ್ಪವನ್ನು ಪ್ರಮುಖ [more]
ಇಎಂಐ ಮೇಲಿನ ಬಡ್ಡಿ ಮನ್ನಾಗೆ ಸುಪ್ರೀಂ ಸೂಚನೆ
October 15, 2020
Varta Mitra News - SP
ರಾಷ್ಟ್ರೀಯ
Comments Off on ಇಎಂಐ ಮೇಲಿನ ಬಡ್ಡಿ ಮನ್ನಾಗೆ ಸುಪ್ರೀಂ ಸೂಚನೆ
Seen By: 45 ನವದೆಹಲಿ: ಕೊರೋನಾ ವೈರಸ್ ಲಾಕ್ಡೌನ್ ಸಂದರ್ಭದಲ್ಲಿ ಮೊರಾಟೋರಿಯಂ ಅವಧಿಯಲ್ಲಿನ ಸಾಲ ಮರುಪಾವತಿ ಮೇಲಿನ ಬಡ್ಡಿಯನ್ನು ಸರ್ಕಾರ ಆದಷ್ಟೂ ಶೀಘ್ರದಲ್ಲಿ ಮನ್ನಾಗೊಳಿಸಬೇಕೆಂದು ಸರ್ವೋಚ್ಚ ನ್ಯಾಯಾಲಯ [more]