ದೇಶದಲ್ಲಿ ಕೋವಿಡ್ ಸೋಂಕಿನಿಂದ ಚೇತರಿಕೆಯ ಪ್ರಮಾಣ ಶೇಕಡ 96.49ಕ್ಕೆ ಏರಿಕೆಯಾಗಿದೆ. ಕಳೆದ 24 ತಾಸಿನಲ್ಲಿ 18 ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಈವರೆಗೆ ಗುಣಮುಖರಾದವರ ಸಂಖ್ಯೆ 1 ಕೋಟಿ ಒಂದು ಲಕ್ಷಕ್ಕೆ ಏರಿದೆ. ಭಾರತದಲ್ಲಿನ ಚೇತರಿಕೆ ಪ್ರಮಾಣ ವಿಶ್ವದಲ್ಲೇ ಅತ್ಯಧಿಕವಾಗಿದೆ. ಒಟ್ಟು ದೃಢಪಟ್ಟ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ ಶೇಕಡ 2.07ರಷ್ಟಿದ್ದು, ಸದ್ಯ ಈ ಪ್ರಕರಣಗಳ ಸಂಖ್ಯೆ 2 ಲಕ್ಷದ 16 ಸಾವಿರದಷ್ಟಿದೆ. ಕಳೆದ 24 ತಾಸಿನಲ್ಲಿ 12 ಸಾವಿರದ 584 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ ಒಂದು ಕೋಟಿ 4 ಲಕ್ಷ ದಾಟಿದೆ. ಭಾರತದಲ್ಲಿ ಸೋಂಕಿನಿಂದ ಸಾವಿನ ಪ್ರಮಾಣ ಶೇಕಡ 1.44ರಷ್ಟಿದ್ದು, ಇದು ಜಾಗತಿಕವಾಗಿ ಕನಿಷ್ಠ ಪ್ರಮಾಣವಾಗಿದೆ. ಕಳೆದ 24 ತಾಸಿನಲ್ಲಿ 167 ಮಂದಿ ಸೋಂಕಿನಿಂದ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ ಒಂದು ಲಕ್ಷ 51 ಸಾವಿರದ 327ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ತಾಸಿನಲ್ಲಿ 8 ಲಕ್ಷದ 97 ಸಾವಿರ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರೊಂದಿಗೆ ಈವರೆಗೆ ಪರೀಕ್ಷಿಸಲಾದ ಒಟ್ಟು ಕೋವಿಡ್ ಮಾದರಿಗಳ ಸಂಖ್ಯೆ 18 ಕೋಟಿ 26 ಲಕ್ಷಕ್ಕೆ ಏರಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
Related Articles
ಭಾರತೀಯ ವೈದ್ಯಕೀಯ ಸಂಘ ಎಚ್ಚರಿಕೆ | ಕೊರೋನಾ 3ನೇ ಅಲೆ ಸನಿಹ ಜನ ಸೇರಿದರೆ ಆಪತ್ತು
July 13, 2021
Varta Mitra News - SP
ರಾಷ್ಟ್ರೀಯ
Comments Off on ಭಾರತೀಯ ವೈದ್ಯಕೀಯ ಸಂಘ ಎಚ್ಚರಿಕೆ | ಕೊರೋನಾ 3ನೇ ಅಲೆ ಸನಿಹ ಜನ ಸೇರಿದರೆ ಆಪತ್ತು
Seen By: 55 ಹೊಸದಿಲ್ಲಿ: ಕೊರೋನಾ ಮೂರನೇ ಅಲೆಯು ಸನಿಹದಲ್ಲಿದ್ದು ಪ್ರವಾಸೋದ್ಯಮ, ತೀರ್ಥಯಾತ್ರೆ, ಇತರ ಧಾರ್ಮಿಕ ಉತ್ಸವಗಳಲ್ಲಿ ಜನರು ಸೇರದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಚ್ಚರಿಕೆ [more]
ಕೊರೊನಾ ಮೂರನೇ ಅಲೆ ಆರಂಭ :ಹಳ್ಳಿಗಳೇ ಈ ಅಲೆಯ ಟಾರ್ಗೆಟ್
July 14, 2021
Varta Mitra News - SP
ರಾಜ್ಯ
Comments Off on ಕೊರೊನಾ ಮೂರನೇ ಅಲೆ ಆರಂಭ :ಹಳ್ಳಿಗಳೇ ಈ ಅಲೆಯ ಟಾರ್ಗೆಟ್
Seen By: 65 ಬೆಂಗಳೂರು,ಜು.14- ಕೊರೊನಾ ಮೂರನೇ ಅಲೆ ಆರಂಭವಾಗುವ ಭೀತಿಯಿದ್ದು, ಸದ್ಯ ನಗರಗಳಿಗಿಂತ ಹಳ್ಳಿಗಳೇ ಈ ಅಲೆಯ ಟಾರ್ಗೆಟ್ ಆಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಗರಕ್ಕೆ [more]
ಕೊರೋನಾ ಲಸಿಕೆ ಸಂಶೋಧನಾ ಕೇಂದ್ರಗಳಿಗೆ ಪ್ರಧಾನಿ ಮೋದಿ ಭೇಟಿ ಕಾಂಗ್ರೆಸ್ ನಾಯಕ ಶ್ಲಾಘನೆ: ಅಂತರ ಕಾಯ್ದುಕೊಂಡ ಪಕ್ಷ
December 1, 2020
Varta Mitra News - SP
ರಾಷ್ಟ್ರೀಯ
Comments Off on ಕೊರೋನಾ ಲಸಿಕೆ ಸಂಶೋಧನಾ ಕೇಂದ್ರಗಳಿಗೆ ಪ್ರಧಾನಿ ಮೋದಿ ಭೇಟಿ ಕಾಂಗ್ರೆಸ್ ನಾಯಕ ಶ್ಲಾಘನೆ: ಅಂತರ ಕಾಯ್ದುಕೊಂಡ ಪಕ್ಷ
Seen By: 52 ಹೊಸದಿಲ್ಲಿ : ಕೋವಿಡ್-19 ಲಸಿಕೆ ಅಭಿವೃದ್ಧಿ ಕೇಂದ್ರಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿರುವುದನ್ನು ಹಿರಿಯ ಕಾಂಗ್ರೆಸ್ ನಾಯಕ ಆನಂದ ಶರ್ಮ ಶ್ಲಾಘಿಸಿದ್ದಾರೆ. [more]