ಪ್ರತಿದಿನ ಕನಿಷ್ಠ 40ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡುವ ಗುರಿಯನ್ನು ಮಾರ್ಚ್ ಅಂತ್ಯದೊಳಗೆ ಸಾಧಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ದೆಹಲಿಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಪ್ರತಿದಿನ 30 ಕಿಲೋ ಮೀಟರ್ ರಸ್ತೆ ನಿರ್ಮಾಣ ಗುರಿ ಸಾಧಿಸಿದೆ. ದೇಶದಲ್ಲಿ ಪ್ರತಿದಿನ ರಸ್ತೆ ಅಪಘಾತಗಳಲ್ಲಿ ಸರಾಸರಿ 415 ಜನರು ಮರಣ ಹೊಂದುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ರಸ್ತೆಗಳ ಗುಣಮಟ್ಟ ಕಾಪಾಡಲು ಬದ್ಧವಾಗಿದೆ. ರಸ್ತೆಗಳಲ್ಲಿರುವ ಗುಂಡಿ, ಕಂದಕಗಳನ್ನು ಮುಚ್ಚಲು 14 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು. ಜನರ ಪ್ರಯಾಣ ಮತ್ತು ಸಂಚಾರ ಸುರಕ್ಷತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು. ರಕ್ಷಣಾ ಸಚಿವ ರಾಜನಾಥ್ಸಿಂಗ್ ಮಾತನಾಡಿ, ರಸ್ತೆ ಸುರಕ್ಷತೆ ಕೇವಲ ಒಂದು ತಿಂಗಳಿಗೆ ಸೀಮಿತವಾಗದೇ ನಿರಂತರ ಪ್ರಕ್ರಿಯೆಯಾಗಬೇಕು. ದೇಶದ ಆರ್ಥಿಕತೆಯ ಪ್ರಗತಿಗೆ ರಸ್ತೆಗಳು ಜೀವನಾಡಿಗಳಾಗಿವೆ. ರಸ್ತೆಗಳ ಮೂಲ ಸೌಕರ್ಯ ಅಭಿವೃದ್ಧಿಪಡಿಸಿ ರಸ್ತೆ ಸಂಪರ್ಕಗಳ ಸುಧಾರಣೆಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು.
Related Articles
ವಿಶ್ವ ವಿದ್ಯಾಲಯದ ಕಾರ್ಯಕ್ರಮದ ವೇಳೆ ಕುಸಿದುಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ
December 7, 2018
Samachar Network-CLB
ರಾಷ್ಟ್ರೀಯ
Comments Off on ವಿಶ್ವ ವಿದ್ಯಾಲಯದ ಕಾರ್ಯಕ್ರಮದ ವೇಳೆ ಕುಸಿದುಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ
Seen By: 59 ಅಹಮದ್ ನಗರ: ಮಹಾರಾಷ್ಟ್ರದಲ್ಲಿ ನಡೆದ ವಿಶ್ವವಿದ್ಯಾನಿಲಯದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುತ್ತಿದ್ದ ವೇಳೆ ಕೇಂದ್ರ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ [more]
ಮೇಕೆದಾಟು: ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಮ್ಮತಿ
December 26, 2018
Samachar Network-CLB
ರಾಜ್ಯ, ರಾಷ್ಟ್ರೀಯ
Comments Off on ಮೇಕೆದಾಟು: ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಮ್ಮತಿ
Seen By: 50 ನವದೆಹಲಿ: ಮೇಕೆದಾಟು ಯೋಜನೆ ಕುರಿತು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸುವುದಾಗಿ ಕೇಂದ್ರ ಭೂಸಾರಿಗೆ, ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ [more]
ಮೀಸಲಾತಿ, ಉದ್ಯೋಗ ಕುರಿತ ಗಡ್ಕರಿ ಹೇಳಿಕೆಗೆ ರಾಹುಲ್ ಪ್ರತಿಕ್ರಿಯೆ
August 6, 2018
Samachar Network-CLB
ರಾಷ್ಟ್ರೀಯ, ರಾಜಕೀಯ, ವಾಣಿಜ್ಯ
Comments Off on ಮೀಸಲಾತಿ, ಉದ್ಯೋಗ ಕುರಿತ ಗಡ್ಕರಿ ಹೇಳಿಕೆಗೆ ರಾಹುಲ್ ಪ್ರತಿಕ್ರಿಯೆ
Seen By: 101 ನವದೆಹಲಿ:ಆ-6: ಉದ್ಯೋಗಾವಕಾಶವೇ ಇಲ್ಲದಿರುವಾಗ ಮೀಸಲಾತಿಯೂ ಉದ್ಯೋಗ ಭದ್ರತೆಯನ್ನು ಒದಗಿಸಲಾರದು ಎಂಬ ಕೇಂದ್ರ ಸಚಿವ ನಿತೀನ್ ಗಡ್ಕರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಶ [more]