
ಬೀದಿ ಬದಿ ವ್ಯಾಪಾರಿಗಳು ಆರ್ಥಿಕವಾಗಿ ಸದೃಢವಾಗಲು ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಬರ್ ಸ್ವನಿಧಿ ಯೋಜನೆ ಸಹಕಾರಿಯಾಗಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೋಜನಾ ನಿರ್ದೇಶಕಿ ಬಿ.ಎಸ್.ಸುಮಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 2 ಸಾವಿರದ 503 ಫಲಾನುಭವಿಗಳಿಗೆ ಕಿರು ಸಾಲ ನೀಡುವ ಗುರಿ ಹೊಂದಲಾಗಿದ್ದು, 1392 ಅರ್ಜಿಗಳನ್ನು ಸ್ವೀಕರಿಸಿ, ಅಪ್ಲೋಡ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.